Accident: ಕಾರಿಗೆ ಬೈಕ್ ಡಿಕ್ಕಿ ಹಿನ್ನೆಲೆ: ಮೂವರು SPOT ಡೆತ್!

ರಾಮನಗರ:- ಜಿಲ್ಲೆಯ ಹಾರೋಹಳ್ಳಿಯ ಇಂಡಸ್ಟ್ರಿಯಲ್ ಏರಿಯಾ ಬಳಿ ಕಾರಿಗೆ ಬೈಕ್ ಡಿಕ್ಕಿ ಯಾಗಿ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜರುಗಿದೆ. ದಯಾನಂದ್ ಸಾಗರ್ ಆಸ್ಪತ್ರೆಗೆ ಮೂವರ ಮೃತದೇಹ ಸ್ಥಳಾಂತರ ಮಾಡಲಾಗಿದ್ದು, ಮೃತರ ಗುರುತು ಪರಿಚಯ ಪರಿಶೀಲನೆ ಮಾಡಲಾಗುತ್ತಿದೆ. ಕಾರು ಮಾಲೀಕನನ್ನು ವಶಕ್ಕೆ ಪಡೆದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತ ಮೂವರು ಉತ್ತರ ಭಾರತದ ಮೂಲದವರು ಎನ್ನಲಾಗುತ್ತಿದೆ