ದಾವಣಗೆರೆ: ಭದ್ರಾ ಜಲಾಶಯದಿಂದ ಕೊನೆ ಭಾಗದ ರೈತರಿಗೆ ನೀರು ತಲುಪದ ಹಿನ್ನಲೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಸುವರ್ಣ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾರಿಗನೂರು ಕ್ರಾಸ್ ನಲ್ಲಿ ಕಬ್ಬು ಬೆಳಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜನವರಿಯಲ್ಲಿ ಹರಿಸಿದ ನಿಂದಲು ಯಾವುದೇ ಪ್ರಯೋಜನ ವಾಗಿಲ್ಲ.
ಈಗ ಫೆಬ್ರವರಿ16 ರಿಂದಲೂ ಕೊನೆ ಭಾಗದ ರೈತರಿಗೆ ನೀರು ತಲುಪಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ವಹಿಸಬೇಕು. ನೀರು ಸಿಗದಿದ್ದರೆ ತೋಟಗಾರಿಕೆ ಬೆಳೆಗಳು ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಇಂಜಿನಿಯರ್ ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಈ ಬಾರಿಯೂ ನೀರು ಸಮರ್ಪಕವಾಗಿ ಸಿಗದಿದ್ದರೆ ಮುಂದೆ ದೊಡ್ಡ ಹೋರಾಟ ರೂಪಿಸುತ್ತೇವೆ ಎಂದು ಸರ್ಕಾರ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.