ತುಮಕೂರು: ಗಾಳಿ ಮಳೆ ಸಹಿತ ಭರ್ಜರಿ ಮಳೆ ಸುರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಚರಂಡಿಗೆ ಇಳಿದಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನಲ್ಲಿ ನಿಟ್ಟರಹಳ್ಳಿ ಗ್ರಾಮದಲ್ಲಿ KSRTC ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಇಳಿದಿರುವ ಘಟನೆ ನಡೆದಿದೆ.
ಮಧುಗಿರಿಯಿಂದ ಕೊಂಡವಾಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಚರಂಡಿಗೆ ಸಿಲುಕಿಕೊಂಡಿದ್ದರಿಂದ ಶಾಲಾ -ಕಾಲೇಜುಗಳಿಗೆ ಹೋಗಲು ಬಸ್ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿತ್ತು.