ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮುರುಘಾ ಶರಣರಿಗೆ ಈ ಹಿಂದೆ ಜಾಮೀನು ಮಂಜೂರು ಆಗಿತ್ತು.
ಬಳಿಕ ಈ ಜಾಮೀನು ಮಂಜೂರು ಪ್ರಶ್ನಿಸಿ ದೂರುದಾರರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್, ಸಾಕ್ಷಿಗಳ ವಿಚಾರಣೆ ಪೂರ್ಣವಾದ ಬಳಿಕ ಜಾಮೀನು ನೀಡುವಂತೆ ಆದೇಶಿಸಿತ್ತು. ಇದೀಗ ಎಲ್ಲ 13 ಸಾಕ್ಷಿಗಳ ವಿಚಾರಣೆ ಮುಗಿದಿದ್ದರಿಂದ ಕೋರ್ಟ್ ಜಾಮೀನು ನೀಡಿದೆ.
Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ದೀಪಾವಳಿಗೆ ಡಬಲ್ ಧಮಾಕಾ ಆಫರ್ ಘೋಷಣೆ
ಈ ಹಿಂದೆ ಹೈಕೋರ್ಟ್ ವಿಧಿಸಿದ್ದ ಷರತ್ತಿನ ಮೇಲೆ ಮುರುಘಾ ಶರಣರು ಬಿಡುಗಡೆಯಾಗಲಿದ್ದಾರೆ. ಮುರುಘಾ ಶರಣರನ್ನು ಬಿಡುಗಡೆ ಮಾಡುವಂತೆ ಕಾರಾಗೃಹ ಅಧಿಕಾರಿಗಳಿಗೆ ಎರಡನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ ಎಂದು ಚಿತ್ರದುರ್ಗದ ಮುರುಘಾ ಶ್ರೀಗಳ ಪರ ವಕೀಲ ವಿಶ್ವನಾಥಯ್ಯ ಹೇಳಿದರು.