Ballari: ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ದುರ್ಮರಣ!

ಬಳ್ಳಾರಿ:- ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ಶಂಕಿತ ಡೆಂಗ್ಯೂವಿನಿಂದ 5 ವರ್ಷದ ಬಾಲಕ ಮೃತಪಟ್ಟ ಘಟನೆ ಜರುಗಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ: ತಾಯಿ ದರ್ಶನಕ್ಕಿಲ್ಲ ಅವಕಾಶ! 5 ವರ್ಷದ ಪ್ರದೀಪ್ ಆಚಾರಿ ಮೃತ ಬಾಲಕ. ಒಂದು ವಾರದಲ್ಲಿ ಸಿದ್ದಮ್ಮನಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಪ್ರತೀ ನಿತ್ಯ ಸೋಂಕಿತರು ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದರೂ ಪಂಚಾಯ್ತಿ ಅಧಿಕಾರಿಗಳು ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.