ಬೆಂಗಳೂರು/ನವದೆಹಲಿ:- 2023-24ನೇ ಸಾಲಿನ 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳನ್ನು ಕೆಎಸ್ಆರ್ಟಿಸಿ ಮುಡಿಗೇರಿಸಿಕೊಂಡಿದೆ.
ಕಾರು ಮತ್ತು ಬಸ್ ಮಧ್ಯೆ ಡಿಕ್ಕಿ ; ಹೊತ್ತುರಿದ ಕಾರು ; ಇಬ್ಬರು ಸಜೀವ ದಹನ
ಕೆಎಸ್ಆರ್ಟಿಸಿಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ 3 ಪ್ರಶಸ್ತಿಗಳು ಲಭಿಸಿದೆ.
ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಡಾ.ಕಿರಣ್ ಬೇಡಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಉಪಮುಖ್ಯ ಸಂಚಾರ ವ್ಯವಸ್ಥಾಪಕ ಗುರುರಾಜ.ಹೆಚ್, ಕಲ್ಯಾಣಾಧಿಕಾರಿ ರಾಧ ಅವರು ಪ್ರಶಸ್ತಿಗಳನ್ನು ಸ್ವೀಕರಿಸಿದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಒಕ್ಕೂಟವು 1965 ಆ. 13ರಂದು ಅಸ್ತಿತ್ವಕ್ಕೆ ಬಂದಿದೆ. ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದೆ.