ಬೆಂಗಳೂರು : ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರು ಕೈಂ ಸಿಟಿಯಾಗಿ ಬದಲಾಗುತ್ತಿದೆ. ಅಪರಾಧ ಚಟುವಟಿಕೆ ಹೆಚ್ಚಾಗಿದೆ. ಆ ಸಾಲಿಗೆ ಮತ್ತೊಂದು ಉದಾಹರಣೆ ಸೇರ್ಪಡೆಗೊಂಡಿದೆ.
ಕೆಲಸ ಮಾಡುವ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆ ನಡೆದಿದೆ.ಚಾಕುವಿನಿಂದ ಹಲ್ಲೆ ಮಾಡಿ, ಹತ್ಯೆ ನಡೆಸಲಾಗಿದ್ದು, ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.ಸೈಯದ್ ಮುಭಾರಕ್ ,ಮೃತ ಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ.
ಕಾರ್ಮಿಕರು ಜೆಲ್ಲಿ, ಮರಳು ಟಾಟಾ ಏಸ್ ಗಾಡಿಗಳಿಗೆ ಲೋಡ್ ಮಾಡುವ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ.ಸಂಪಿಗೆ ಹಳ್ಳಿ ಠಾಣೆಯ ಆಕಾಶವಾಣಿ ಲೇಔಟ್ ನಲ್ಲಿ ಘಟನೆ ನಡೆದಿದೆ.ಆರೋಪಿ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ.ಸಂಪಿಗೆ ಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.