ನವದೆಹಲಿ: ಬೆಂಗಳೂರು ಬೆಳೆಯುತ್ತಿರುವುದನ್ನು ನೋಡಿದರೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 150 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತಿಲ್ಲ.
ಹೊಸೂರು ತಮಿಳುನಾಡಿನಲ್ಲಿದ್ದರೂ ಅದರ ಭಾಗ ಬೆಂಗಳೂರಿನ ಮೇಲಿದೆ. ಬೆಂಗಳೂರು ಬೆಳೆಯುತ್ತಿರುವುದನ್ನು ನೋಡಿದರೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ.ಹೊಸದಾಗಿ ವಿಮಾನ ನಿಲ್ದಾಣ ಇಲ್ಲಿ ಮಾಡದಿದ್ದರೂ ಹೆಚ್ಎಎಲ್ ಅನ್ನು ದೇಶಿಯ ವಿಮಾನ ನಿಲ್ದಾಣವಾಗಿ ಬಳಕೆ ಮಾಡಬಹುದಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ನಾನು ಸಿಎಂ ಆಗಿದ್ದಾಗ ರಕ್ಷಣಾ ಸಚಿವರ ಬಳಿ ಇದರ ಬಗ್ಗೆ ಮಾತನಾಡಿದ್ದೆ. ಹೆಚ್ಎಎಲ್ ಅನುಮತಿ ನೀಡಿದರೆ ಅದರ ಬಳಕೆಗೆ ಸರ್ಕಾರ ಸಿದ್ಧವಿದೆ ಎಂದರು. ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನಲ್ಲಿ ಐಟಿ ಅಭಿವೃದ್ಧಿ ಆಗುವುದಿಲ್ಲ. ಬೆಂಗಳೂರು ಐಟಿ ಕ್ಷೇತ್ರ ಈಗಾಗಲೇ ಬೆಳೆದಿದೆ. ನಮ್ಮ ಜನರು ಬುದ್ಧಿವಂತರಿದ್ದಾರೆ. ಅವರ ಟ್ಯಾಲೆಂಟ್ ನಿಂದ ಬೆಂಗಳೂರು ಬೆಳೆದಿದೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)