ಹುಬ್ಬಳ್ಳಿ:- ಲೋಹಿಯಾ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜರುಗಿದೆ.
Virat Kohli: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ..!
25 ವರ್ಷದ ಆಕಾಶ್ ಮಠಪತಿ ಮೃತ ದುರ್ದೈವಿ. ಆಕಾಶ್ ಮಠಪತಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಹಳೇ ದ್ವೇಷದ ಹಿನ್ನೆಲೆ ಮದ್ಯ ಕುಡಿಸಿ ದುಷ್ಕರ್ಮಿಗಳಿಂದ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆಕಾಶ್ ಮಠಪತಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಶವಾಗಾರದ ಮುಂದೆ ಆಕಾಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು
ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ರೇಣುಕಾ ಸುಕುಮಾರ ಪ್ರತಿಕ್ರಿಯಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ತಲೆಗೆ ಗಾಯ ಆಗಿರುವುದು ತಿಳಿದು ಬಂದಿದೆ. ಆಕಾಶ್ ತಲೆ ಬಿಟ್ಟು ಬೇರೆ ಕಡೆ ಗಾಯ ಇಲ್ಲ. ತಂದೆ ಶೇಖರಯ್ಯ ಮಠಪತಿ ಅವನ ಸ್ನೇಹಿತರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.