ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ವಾಯುಭಾರ ಕುಸಿತದ ಪರಿಣಾಮವಾಗಿ, ಈ ಜಿಲ್ಲೆಗಳಿಗೆ ಭಾರಿ ಭರ್ಜರಿ ಮಳೆ ಗ್ಯಾರಂಟಿ ಆಗಿದೆ!.
ಕರ್ನಾಟಕದ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಗಳಲ್ಲು ಮಳೆ ಅಬ್ಬರಿಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಇದರ ಜೊತೆ ಹಾಸನ ಸೇರಿ ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆ ಅಬ್ಬರ ಜೋರಾಗಿ ಇರಲಿದೆ. ಚಿಕ್ಕಬಳ್ಳಾಪುರ & ಕೋಲಾರ ಜಿಲ್ಲೆಗೂ ಮಳೆಯ ಮೋಡಗಳು ಅಪ್ಪಳಿಸಲಿವೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.