ಗದಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಅದರಹಳ್ಳಿ ಗ್ರಾಮದ ರವೀನಾ ಲಮಾಣಿ ಕಲಾ ವಿಭಾಗದಲ್ಲಿ 600 ಕ್ಕೆ 595 ಅಂಕ ಪಡೆದು ರಾಜ್ಯಕ್ಕೆ ಎರಡನೆ ಸ್ಥಾನ ಪಡೆದಿರುವುದು ಅಭಿನಂದನೀಯ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,
![Demo](https://ainlivenews.com/wp-content/uploads/2023/12/spoorthi-1.jpg)
ಗ್ರಾಮೀಣ ಪ್ರದೇಶದಲ್ಲಿ ಜನಿಸಿ, ಬಡತನದ ನಡುವೆಯೇ ರವೀನಾ ಈ ಸಾಧನೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಷಯ.ರವೀನಾ ಪೋಷಕರಾದ ಸೋಮಣ್ಣ ಲಮಾಣಿಯವರಿಗೂ ಹಾಗೂ ರವೀನಾಳಿಗೆ ಹಾರ್ದಿಕ ಅಭಿನಂದನೆಗಳು. ಹೆತ್ತವರಿಗೆ, ಹುಟ್ಟೂರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತೆ ಭವಿಷ್ಯದಲ್ಲಿ ನಿಮ್ಮ ಕನಸುಗಳು ನನಸಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)