ಬೆಂಗಳೂರು: ಬಿಲ್ಡರ್ ಒಬ್ಬರಿಗೆ ಸಹಾಯ ಮಾಡುವ ದೃಷ್ಟಿಯಿಂದ, ರಾತ್ರೋರಾತ್ರಿ ಓಣಿಯೊಂದರ ಕಟ್ಟಡವನ್ನು ಬಿಬಿಎಂಪಿ ಅಧಿಕಾರಿಗಳು ನೆಲಸಮ ಮಾಡಿದ್ದಾರೆ. ಕೋರ್ಟ್ ಆದೇಶವನ್ನ ಉಲ್ಲಂಘಿಸಿ, ಬಿಬಿಎಂಪಿಯ ಅಧಿಕಾರಿಯ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ. ನಾಗವಾರದ ಮಾನ್ಯತಾ ಟೆಕ್ ಪಾರ್ಕ್ ಒಳಗೆ ನುಗ್ಗಿದ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಪಡೆ ಓಣಿಯ ಕಟ್ಟಡವನ್ನ ನೆಲಸಮ ಮಾಡಿದೆ. ಓಣಿಯ ಕಟ್ಟಡವನ್ನ ಯಥಾಸ್ಥಿತಿಯಲ್ಲಿ ಇರುವಂತೆ ಕೋರ್ಟ್ ಆದೇಶ ನೀಡಿದೆ.
ಆದರೂ ಡಿಸಾಸ್ಟರ್ ಮ್ಯಾನೇಜ್ಮೆಂಟ್ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದೆ. ಇದೆಲ್ಲವೂ ಬಿಲ್ಡರ್ ಒಬ್ಬರಿಗೆ ಸಹಾಯ ಮಾಡುವ ದೃಷ್ಟಿಯಿಂದ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ ಕೋರ್ಟ್ ಮೊರೆ ಹೋಗುವುದಾಗಿ ಸ್ಥಳೀಯರು ಹೇಳಿದ್ದಾರೆ. ಮಧ್ಯರಾತ್ರಿಯಲ್ಲಿ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾರ್ಯಾಚರಣೆ ಮಾಡುವ ಅವಶ್ಯಕತೆ ಏನಿತ್ತು ಅಂತ ಸ್ಥಳೀಯ ಪ್ರಶ್ನಿಸಿದ್ದಾರೆ. ಈ ಅಕ್ರಮ ಕಾರ್ಯಾಚರಣೆಗೆ ಬಿಬಿಎಂಪಿ ಅಧಿಕಾರಿ ಸಾಥ್ ಕೊಟ್ಟಿದ್ದಾರೆ ಅಂತ ಸ್ಥಳೀಯರು ದೂರಿದ್ದಾರೆ.