ಬಿಸಿಸಿಐನಿಂದ ಬಿಗ್ ಶಾಕ್ ಎದುರಾಗಿದ್ದು, ಟೀಮ್ ಇಂಡಿಯಾದಿಂದ ಕೆ.ಎಲ್ ರಾಹುಲ್ಗೆ ಗೇಟ್ಪಾಸ್ ಸಿಕ್ಕಿದೆ. ಇಂದು ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ ಕೊನೆಯ ಏಕದಿನ ಪಂದ್ಯ ನಡೆಯಲಿದ್ದು, ಬಿಗ್ ಅಪ್ಡೇಟ್ ಒಂದಿದೆ.
ಜಾಗತಿಕ ಹೂಡಿಕೆದಾರರ ಸಮಾವೇಶ: 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ!
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಟೀಮ್ ಇಂಡಿಯಾದ ಆಲ್ರೌಂಡರ್ ಪ್ರದರ್ಶನವೂ ಅಭಿಮಾನಿಗಳಲ್ಲಿ ಭಾರೀ ಸಂತಸ ತಂದಿದೆ. ಅದರಲ್ಲೂ ತಂಡದ ಬ್ಯಾಟಿಂಗ್ ವಿಭಾಗ ಬಲಿಷ್ಠ ಆಗಿರುವುದು ಬಿಸಿಸಿಐಗೆ ನಿರಾಳ ಮೂಡಿಸಿದೆ. ಇದರ ಮಧ್ಯೆ ಕೆಎಲ್ ರಾಹುಲ್ ಕಳಪೆ ಫಾರ್ಮ್ ತಂಡಕ್ಕೆ ತಲೆನೋವು ತಂದಿರುವುದು ನಿಜ. ಹಾಗಾಗಿ ಇವರಿಗೆ 3ನೇ ಪಂದ್ಯದಿಂದ ಗೇಟ್ಪಾಸ್ ಸಿಗೋ ಸಾಧ್ಯತೆ ಇದೆ.
ಇಂಗ್ಲೆಂಡ್ ವಿರುದ್ಧ ನಡೆದ ಕಳೆದ ಎರಡು ಪಂದ್ಯಗಳಲ್ಲೂ ಕೆ.ಎಲ್ ರಾಹುಲ್ ರನ್ ಕಲೆ ಹಾಕುವಲ್ಲಿ ಎಡವಿದ್ದಾರೆ. ಕಟಕ್ನಲ್ಲಿ 14 ಎಸೆತಗಳಲ್ಲಿ 10 ರನ್ ಗಳಿಸಿದ್ದ ರಾಹುಲ್, ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು.
ಮೊದಲ 2 ಏಕದಿನ ಪಂದ್ಯಗಳಲ್ಲಿ ರಾಹುಲ್ ಗಳಿಸಿದ್ದು ಕೇವಲ 12 ರನ್. ಹೀಗಾಗಿ ರಾಹುಲ್ಗೆ ಮುಂದಿನ ಪಂದ್ಯದಲ್ಲಿ ಅವಕಾಶ ಸಿಗುವ ಬಗ್ಗೆ ಅನುಮಾನ ಮೂಡಿದೆ. ಇದಕ್ಕೆ ಕಾರಣ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್. ಇವರನ್ನು 5ನೇ ಕ್ರಮಾಂಕದ ಬದಲಿಗೆ 6ನೇ ಸ್ಥಾನ ಆಡಿಸಿದ್ದು ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣ. ಹೀಗಾಗಿ ಕೆ.ಎಲ್ ರಾಹುಲ್ ಅವರನ್ನು ಕೊನೆಯ ಏಕದಿನ ಪಂದ್ಯದಿಂದ ಕೂರಿಸುವ ಬಗ್ಗೆ ಮಾಹಿತಿ ಸಿಕ್ಕಿದೆ.