ಬೆಂಗಳೂರು:- ತೋಟನಹಳ್ಳಿ ಗ್ರಾಮದ ಉಷಾ ಎಂಬುವರ 2 ಲಕ್ಷ 52 ಸಾವಿರ ರೂ. ಬೆಲೆ ಬಾಳುವ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ ಖದೀಮರು ಕಾರಿನಲ್ಲಿ ಪರಾರಿ ಆಗಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಳಿಂಬೆ ಬೆಳೆಗೆ ಹರಡಿದ ವೈರಸ್: 30 ಲಕ್ಷ ರೂ. ನಷ್ಟ, ಕಣ್ಣೀರು ಹಾಕಿದ ರೈತ!
ಉಷಾ ಅವರು ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬಳಿ ಬಣ್ಣದ ಐ10 ಕಾರಿನಲ್ಲಿ ಬಂದಿದ್ದ ಮೂವರು ಕಳ್ಳರಿಂದ ಕೃತ್ಯವೆಸಲಾಗಿದೆ. ಕಳ್ಳರಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ.
ಸಂಜಯನಗರ ಪೊಲೀಸರಿಂದ ಉತ್ತರ ಪ್ರದೇಶ ಮೂಲದ ಮೂವರು ಮನೆಗಳ್ಳರ ಬಂಧನ ಮಾಡಲಾಗಿದೆ. ಅಕ್ಬರ್, ಮೊಬಿನಾ ಮತ್ತು ಸೋನು ಯಾದವ್ ಬಂಧಿತರು. ಸಂಜಯನಗರದ 1ನೇ ಮುಖ್ಯರಸ್ತೆಯ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ದೋಚಿ ಉತ್ತರ ಪ್ರದೇಶಕ್ಕೆ ಪರಾರಿಯಾಗಿದ್ದರು.
ಸದ್ಯ ಬಂಧಿತರಿಂದ 30 ಲಕ್ಷ ರೂ. ಮೌಲ್ಯದ 405 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.