ಬೆಂಗಳೂರು:- ಸರ್ಕಾರಿ ಕೆಲಸ ಅಂದ್ರೆ ದೇವರ ಕೆಲಸ ಅಂತಾರೆ. ಆದ್ರೆ ಇಲ್ಲೋರ್ವ ಅಧಿಕಾರಿ. ತಾನು ಕೆಲಸ ಮಾಡುವ ಜಾಗದಲ್ಲೇ ಬೆಡ್ ರೂಂ ಮಾಡಿದ್ದ. ಇದೀಗ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಆತನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಇಂದಿನಿಂದ ಬೆಂಗಳೂರಿನಲ್ಲಿ WPL ಮ್ಯಾಚ್: ಕ್ರಿಕೆಟ್ ಪ್ರೇಮಿಗಳಿಗೆ ಮೆಟ್ರೋ ಶುಭ ಸುದ್ದಿ!
ಹೌದು, ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡಿದ್ದ ಕಾರವಾರದ ಪ್ರವಾಸೋದ್ಯಮ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಜಯಂತ್ ಅಮಾನತುಗೊಂಡ ಪ್ರವಾಸೋದ್ಯಮ ಅಧಿಕಾರಿ. ಉತ್ತರ ಕನ್ನಡ ಪ್ರವಾಸೋದ್ಯಮ ಉಪ ನಿರ್ದೇಶಕ ಜಯಂತ್ ತಮ್ಮ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.
ಈ ಸಂಬಂಧ ಸಚಿವ ಎಚ್ ಕೆ ಪಾಟೀಲ್ ಮಾತನಾಡಿ, ನನಗೂ ಜಯಂತ್ ಎಂಬ ಅಧಿಕಾರಿ ಬಗ್ಗೆ ಮಾಹಿತಿ ಬಂದಿದೆ. ಇಂಥ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ ಎಂದರು.