ತಮಿಳಿನ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ 11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಬೆನ್ನಲ್ಲೇ ಅವರ ವೈಯಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್, ನಮ್ಮ ಖಾಸಗಿ ಜೀವನವನ್ನು ಗೌರವಿಸಿ ಎಂದು ಮನವಿ ಮಾಡಿದ್ದಾರೆ.
ಪರಸ್ಪರ ಒಪ್ಪಿಗೆ ಮೇರೆಗೆ ನಾವು ಬೇರೆ ಬೇರೆಯಾಗಲು ನಿರ್ಧರಿಸಿದ್ದೇವೆ. ಭಾವನೆಗಳನ್ನು ಗೌರವಿಸಿ, ಕಠಿಣ ಸಮಯವನ್ನು ಅರ್ಥಮಾಡಿಕೊಳ್ಳಿ ಎಂದು ನೆಟ್ಟಿಗರಲ್ಲಿ ಕೇಳಿಕೊಂಡಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಅನಗತ್ಯ ಹೇಳಿಕೆಗಳು ನಮ್ಮ ಮೇಲೆ ಪರಿಣಾಮ ಬೀರುತ್ತಿವೆ ಎಂಬುದನ್ನು ತಿಳಿಸಿದ್ದಾರೆ. ನೋವುಂಟು ಮಾಡುವ ಟೀಕೆಗಳು ಮತ್ತು ಟ್ರೋಲಿಂಗ್ಗಳನ್ನು ನಿಲ್ಲಿಸುವ ಸಲುವಾಗಿ ಪೋಸ್ಟ್ ಶೇರ್ ಮಾಡಿದ್ದಾರೆ. ಜನರು ಸರಿಯಾದ ಮಾಹಿತಿ ಅಥವಾ ತಿಳುವಳಿಕೆಯಿಲ್ಲದೇ ಇಬ್ಬರು ವ್ಯಕ್ತಿಗಳ ಪ್ರತ್ಯೇಕತೆಯ ಬಗ್ಗೆ ಚರ್ಚಿಸುವುದು ಅಸಮಾಧಾನಕರ ವಿಚಾರ. ಸೆಲೆಬ್ರಿಟಿ ಎಂಬ ಕಾರಣಕ್ಕಾಗಿ, ಖಾಸಗಿ ಜೀವನದ ಬಗ್ಗೆ ಟೀಕೆ ಮಾಡುವುದು ಸೂಕ್ತವಲ್ಲ. ತಮ್ಮ ಹೇಳಿಕೆಗಳು ಇತರರಿಗೆ ನೋವುಂಟು ಮಾಡಬಹುದು ಎಂಬುದನ್ನು ಮರೆತು ಬಿಡುವಷ್ಟು ತಮಿಳು ಜನರು ಘನತೆ ಕಳೆದುಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಡಿವೋರ್ಸ್ ಬಗ್ಗೆ ಅಸಲಿ ಕಾರಣವನ್ನು ನಮ್ಮ ಸ್ನೇಹಿತರು ಮತ್ತು ಕುಟುಂಬಕ್ಕೆ ತಿಳಿಸಲಾಗಿದೆ. ನಾವು ಈ ನಿರ್ಧಾರ ಕೈಗೊಳ್ಳುವ ಮೊದಲು ಸಾಕಷ್ಟು ಯೋಚಿಸಿದ್ದೇವೆ. ನಿಮ್ಮ ಟೀಕೆಗಳು ನೋವುಂಟು ಮಾಡುತ್ತವೆ ಎಂಬುದನ್ನು ನಿಮಗೆ ತಿಳಿಸಲು ನಾನು ಈ ಬರಹವನ್ನು ಬರೆಯುತ್ತಿದ್ದೇನೆ. ದಯವಿಟ್ಟು ಎಲ್ಲರ ಭಾವನೆಗಳ ಬಗ್ಗೆ ಗಮನವಿರಲಿ. ಸಹಾಯಕ್ಕಾಗಿ ನಾನು ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)