ಬಳ್ಳಾರಿ: ನಗರದ 34ನೇ ವಾರ್ಡಿನ ಭತ್ರಿ ಪ್ರದೇಶದ ಶ್ರೀ ಭತ್ರಿ ಈರಣ್ಣ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಇಬ್ಬರು ಕಳ್ಳರು ನೇರವಾಗಿ ದೇವಸ್ಥಾನಕ್ಕೆ ನುಗ್ಗಿ ಹುಂಡಿಯಲ್ಲಿದ್ದ ಸುಮಾರು 2.ಲಕ್ಷ ರೂಪಾಯಿ ಹಣವನ್ನು ಹಂಡಿ ಸಮೇತ ದೋಚಿ ಪರಾರಿಯಾಗಿದ್ದಾರೆ.
ಯಾರು ಇಲ್ಲದ ಸಮಯದಲ್ಲಿ ದೇವಸ್ಥಾನಕ್ಕೆ ಬಂದು ಹುಂಡಿಯನ್ನು ಎತ್ತಿಕೊಂಡು ಹೋಗಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗ್ಗೆ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಪೂಜಾರಿ ಆಗಮಿಸಿದಾಗ ಕಳ್ಳತನವಾಗಿದ್ದನ್ನು ಗಮನಿಸಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಜೊತೆ ಚರ್ಚಿಸಿ, ಬಳಿಕ ಕೌಲ್ ಬಜಾರ್ ಭಾಗದ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.