ಬೆಂಗಳೂರು :– ರಾಜಧಾನಿ ಬೆಂಗಳೂರಿನ ಶ್ರೀಗಂಧಕಾವಲ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸುಮ್ಮನಹಳ್ಳಿ ಬ್ರಿಡ್ಜ್ ಬಳಿಯ ಶ್ರೀಗಂಧಕಾವಲ್ನ ಅರಣ್ಯ ಪ್ರದೇಶದಲ್ಲಿ ಘಟನೆ ಜರುಗಿದೆ.
ಲೋಕಸಭಾ ಎಲೆಕ್ಷನ್ ಮುಗಿದ ಬೆನ್ನಲ್ಲೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ…!
ಬಿಬಿಎಂಪಿ ವ್ಯಾಪ್ತಿಗೆ ಸೇರಿದ 3 ಎಕರೆ ಅರಣ್ಯ ಪ್ರದೇಶದಲ್ಲಿ ಸುಮಾರು ಅರ್ಧ ಭಾಗಕ್ಕೆ ಬೆಂಕಿ ಆವರಿಸಿದೆ. ತೀವ್ರ ಬೇಸಿಗೆಯ ಪರಿಣಾಮ ಬೆಂಕಿ ಭಾರೀ ಪ್ರಮಾಣದಲ್ಲಿ ವ್ಯಾಪಿಸಿದೆ. ಒಣ ಕಸಕ್ಕೆ ಹಾಕಿದ ಬೆಂಕಿ ಅರಣ್ಯ ಪ್ರದೇಶಕ್ಕೆ ಹಬ್ಬಿದೆ ಎಂದು ಶಂಕಿಸಲಾಗಿದೆ. ಗುರುವಾರ ರಾತ್ರಿಯೇ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ ಎಂದು ತಿಳಿದು ಬಂದಿದೆ.
ನಗರದಲ್ಲಿ ತೆರವುಗೊಳಿಸಿದ ಮರಗಳನ್ನು ಇಲ್ಲಿ ತಂದು ಡಂಪ್ ಮಾಡಲಾಗುತ್ತಿತ್ತು. ಅದೇ ರೀತಿ ಹೊರಗಡೆ ಮಾರಾಟ ಮಾಡುವ ಕಟ್ಟಿಗೆಗಳನ್ನು ಇಲ್ಲಿ ತಂದು ಹಾಕಿ ಹರಾಜು ಮಾಡಲಾಗ್ತಿತ್ತು. ಹರಾಜಾಗದೇ ಉಳಿದಿದ್ದ ಕಟ್ಟಿಗೆಗಳೆಲ್ಲ ಅರಣ್ಯ ವ್ಯಾಪ್ತಿಯಲ್ಲಿ ರಾಶಿ ಬಿದ್ದಿದ್ದವು. ತೀವ್ರ ಬಿಸಿಲಿನ ಕಾರಣ ಸಂಪೂರ್ಣ ಒಣಗಿದ್ದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.