Facebook Twitter Instagram YouTube
    ಕನ್ನಡ     English     తెలుగు
    Monday, August 15
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ಎಟಿಎಂನಲ್ಲಿ ಸಹಾಯ ಮಾಡಿದ್ದ ವ್ಯಕ್ತಿಯಿಂದ ವೃದ್ಧನಿಗೆ 8.5 ಲಕ್ಷ ವಂಚನೆ: ಆರೋಪಿ ಅಂದರ್

    ಎಟಿಎಂನಲ್ಲಿ ಸಹಾಯ ಮಾಡಿದ್ದ ವ್ಯಕ್ತಿಯಿಂದ ವೃದ್ಧನಿಗೆ 8.5 ಲಕ್ಷ ವಂಚನೆ: ಆರೋಪಿ ಅಂದರ್

    Author AINBy Author AIN
    Share
    Facebook Twitter LinkedIn Pinterest Email

    ನಿವೃತ್ತ ಸರ್ಕಾರಿ ನೌಕರರೊಬ್ಬರಿಗೆ ಎಟಿಎಂ ನಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ವ್ಯಕ್ತಿಯೋರ್ವ ಡೆಬಿಟ್ ಕಾರ್ಡ್ ನ್ನು ಬದಲು ಮಾಡಿ ವೃದ್ಧರ ಖಾತೆಯಿಂದ 8.5 ಲಕ್ಷ ರೂಪಾಯಿ ವಂಚಿಸಿದ್ದಾನೆ. 

    ಯಲಹಂಕ 4ನೇ ಬ್ಲಾಕ್ ನಿವಾಸ ರಾಮಕೃಷ್ಣ ಗೌಡ ಎಂಬವವರು ಇತ್ತೀಚೆಗೆ ಎಟಿಎಂ ಕಿಯೋಸ್ಕ್ ಗೆ ಹಣ ತೆಗೆಯಲು ಹೋದಾಗ 8.54 ಲಕ್ಷ ರೂಪಾಯಿ ಇರಬೇಕಿದ್ದ ಹಣದ ಜಾಗದಲ್ಲಿ 529 ರೂಪಾಯಿ ಕಂಡು ಅಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ಬ್ಯಾಂಕ್ ನ್ನು ಸಂಪರ್ಕಿಸಿದಾಗ ಅವರ ಬಳಿ ಇರುವ ಡೆಬಿಟ್ ಕಾರ್ಡ್ ಬ್ಯಾಂಕ್ ನಿಂದ ನೀಡಿರುವುದು ಅಲ್ಲ ಎಂಬ ಮಾಹಿತಿಯನ್ನು ಕೇಳಿ ಮತ್ತೂ ಆಘಾತಕ್ಕೊಳಗಾಗಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಖಾತೆಯಿಂದ ಮೇ.21 ರಿಂದ ಜೂ.13 ವರೆಗೆ ಹಲವು ವಹಿವಾಟುಗಳಲ್ಲಿ ಹಣ ತೆಗೆಯಲಾಗಿದೆ ಎಂಬ ಮಾಹಿತಿ ಬ್ಯಾಂಕ್ ನವರು ನೀಡಿದ್ದಾರೆ. ಈ ವೇಳೆ ಯಲಹಂಕಾದಲ್ಲಿ ಮೇ.21 ರಂದು ಡೆಬಿಟ್ ಕಾರ್ಡ್ ನ ಹೊಸ ಪಿನ್ ರಚಿಸಲು ತಾವು ಎಟಿಎಂ ಕಿಯೋಸ್ಕ್ ಗೆ ತೆರಳಿದ್ದಾಗ ಸಹಾಯ ಮಾಡಿದ್ದ ವ್ಯಕ್ತಿ ನೆನಪಾಗಿದ್ದು ಆತನೆ ತಮಗೆ ಮೋಸ ಮಾಡಿರೋದು ಗೊತ್ತಾಗಿದೆ. 

    Demo

    ಎಟಿಎಂ ನ ಕಿಯೋಸ್ಕ್ ನಲ್ಲಿ ಎಟಿಎಂ ಡೆಬಿಟ್ ಕಾರ್ಡ್ ನ ಪಿನ್ ರಚಿಸುವ ಪ್ರಕ್ರಿಯೆ ತಿಳಿಯದ ಕಾರಣ, ಅಲ್ಲೇ ಕಿಯೋಸ್ಕ್ ಒಳಭಾಗದಲ್ಲಿದ್ದ ವ್ಯಕ್ತಿಯೋರ್ವನಿಂದ ಸಹಾಯ ಪಡೆದಿದ್ದರು. ವಂಚಕನಾಗಿದ್ದ ಆತ ರಾಮಕೃಷ್ಣ ಗೌಡರಿಗೆ ಪಿನ್ ರಚಿಸುವುದಷ್ಟೇ ಅಲ್ಲದೇ 40,000 ರೂಪಾಯಿ ಹಣ ತೆಗೆಯಲೂ ಸಹಾಯ ಮಾಡಿದ್ದಾನೆ.

    ಈ ವೇಳೆ ಡೆಬಿಟ್ ಕಾರ್ಡ್ ಹಿಂತಿರುಗಿ ನೀಡುವಾಗ ತನ್ನ ಬಳಿ ಇದ್ದ ಕಾರ್ಡ್ ನ್ನು ನೀಡಿ ಅವರ ಕಾರ್ಡ್ ನ್ನು ತಾನು ಪಡೆದಿದ್ದಾನೆ. ತಕ್ಷಣವೇ ರಾಮಕೃಷ್ಣ ಗೌಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅವರು ನೀಡಿದ್ದ ದೂರಿನ ಆಧಾರದಲ್ಲಿ ಈಶಾನ್ಯ ಸಿಇಎನ್ ಪೊಲೀಸರು ಅಟ್ಟೂರ್ ಲೇಔಟ್ ನ ನಿವಾಸಿ ಮಲ್ಲಿನಾಥ ಅಂಗಡಿ (32) ಎಂಬಾತನನ್ನು ಬಂಧಿಸಿದ್ದು ಆರೋಪಿಯಿಂದ ನಾಲ್ಕು ಬಳೆ, ಮೂರು ಉಂಗುರಗಳೂ ಸೇರಿದಂತೆ ತನ್ನ ಕುಟುಂಬ ಸದಸ್ಯರಿಗೆಂದು ಖರೀದಿಸಿದ್ದ ಹಲವು ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

    ಈಶಾನ್ಯ ಡಿಸಿಪಿ ಅನೂಪ್ ಎ ಶೆಟ್ಟಿ, ಎಟಿಎಂ ಕೇಂದ್ರಗಳಿಂದ ಹಣ ತೆಗೆಯುವಾಗ ಎಚ್ಚರಿಕೆಯಿಂದ ಇರಬೇಕೆಂದು ಜನತೆಗೆ ಕರೆ ನೀಡಿದ್ದಾರೆ. ಎಟಿಎಂ ಕಿಯೋಸ್ಕ್ ಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಗಳನ್ನು ಯಾರಿಗೂ ಹಸ್ತಾಂತರಿಸಬೇಡಿ, ಪಿನ್ ಹಾಕುವಾಗ ನಿಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ, ಪ್ರತಿ ವಹಿವಾಟು ನಡೆದಾಗಲೂ ಎಸ್ಎಂಎಸ್ ಅಲರ್ಟ್ ಬರುವಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

     

    Share. Facebook Twitter LinkedIn Email WhatsApp

    Related Posts

    ಕೋಮುವಾದಿ ತನದಿಂದ ಪ್ರಜಾಪ್ರಭುತ್ವ ನಾಶವಾಗುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ

    ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಾನು ಅಂದುಕೊಂಡಂತೆ ಆಗಿದೆ: ಶಾಸಕ ಜಮೀರ್

    ಇಂದು ಎರಡು ಹೊಸ ಯೋಜನೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

    ತಮ್ಮ ನಿವಾಸದ ಮೇಲೆ ರಾಷ್ಟ್ರ ಧ್ವಜಾರೋಹಣ ಮಾಡಿದ ಡಿಕೆ ಶಿವಕುಮಾರ್

    ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದ ಎಸಿ ಶಿವಣ್ಣ

    Corona Crisis: ಕೋವಿಡ್‌ ಸೋಂಕಿತರ ಸಾವು ಹೆಚ್ಚಳ: ಬೆಂಗಳೂರಿನಲ್ಲಿ ನಿನ್ನೆ 1,108 ಮಂದಿಗೆ ಕೋವಿಡ್ ಧೃಡ!

    ಬೃಹತ್ ರಾಷ್ಟ್ರಧ್ವಜ ಮೆರವಣಿಗೆಗೆ ಸಿದ್ದರಾಮಯ್ಯ​ ಚಾಲನೆ

    ಯಾರೋ ಒಬ್ಬರಿಂದ ಸ್ವಾತಂತ್ರ್ಯ ಬಂದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಅವರ ಕೊಡುಗೆ ಸಾಕಷ್ಟಿದೆ: ಎಚ್ ಡಿ ಕುಮಾರಸ್ವಾಮಿ

    ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಧ್ವಜಾರೋಹಣ

    75 ನೇ ಸ್ವಾತಂತ್ರ್ಯ ದಿನಾಚರಣೆ: ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿ.ಎಂ

    ಸಿಎಂ ಬೊಮ್ಮಾಯಿ ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ

    ಲಜ್ಜೆಗೆಡಿತನದ ಪರಮಾವಧಿ: ಬಿಜೆಪಿ ನಾಯಕರಿಗೆ ರಮೇಶ್ ಬಾಬು ಬಹಿರಂಗ ಪತ್ರ

    ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ: ಸಿಎಂ ಬಸವರಾಜ್ ಬೊಮ್ಮಾಯಿ

    ರಾಜಧಾನಿಯಲ್ಲಿ ಪೊಲೀಸ್ ಬಿಗಿ ಭದ್ರತೆ: ಹೇಗಿರಲಿದೆ ಗೊತ್ತಾ ಸೆಕ್ಯೂರಿಟಿ?

    ಅಮೃತ ಮಹೋತ್ಸವ: ರಾಷ್ಟ್ರಪತಿ ಪದಕಕ್ಕೆ ಕರ್ನಾಟಕದ 18 ಅಧಿಕಾರಿಗಳು ಆಯ್ಕೆ

    ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ: ಎನ್.ರವಿಕುಮಾರ್

    ಹೊಸ ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    ದೇವಸ್ಥಾನಕ್ಕೆ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆ ತಡೆ; ಭಕ್ತರ ಪ್ರತಿಭಟನೆ

    ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಧ್ಯೇಯ: ಸಚಿವ ಕೋಟ ಶ್ರೀನಿವಾಸ ಪೂಜಾರಿ

    ಸ್ವಾತಂತ್ರ್ಯ ಅಮೃತ್ ಮಹೋತ್ಸವ: 3.5 ಕಿಲೋಮೀಟರ್ ಉದ್ದದ ತ್ರಿವರ್ಣ ಧ್ವಜ ಪ್ರದರ್ಶನ!

    75 ನೇ ಸ್ವಾತ್ಯಂತ್ರ್ಯ ಸಂಭ್ರಮಕ್ಕೆ ಕೋಮುದ್ವೇಷದ ಕಿಡಿ.!: ಕಾಂಗ್ರೆಸ್ ನಿಂದ ದೂರು ದಾಖಲು

    ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಅನುಮಾನಸ್ಪದ ಸಾವು!: ತಂದೆ ಗಂಭೀರ ಆರೋಪ

    ಆನೇಕಲ್ ಪೊಲೀಸ್ ಠಾಣೆಯಲ್ಲಿ ರಕ್ಷಾಬಂಧನ ಸಂಭ್ರಮ!

    ಪ್ರಪಂಚದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ದೇಶ ಭಾರತ: ಶಾಸಕ ಎಂ. ಸತೀಶ್ ರೆಡ್ಡಿ

    ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮ್ಯಾರಾಥಾನ್ ಆಯೋಜನೆ

    largest national flag…. ಕೋಲಾರ; ದೇಶದಲ್ಲೇ ಅತಿದೊಡ್ಡ ರಾಷ್ಟದ್ವಜ ಹಾರಿಸಲು ಸಿದ್ದತೆ!

    ಟಿಪ್ಪು ಫ್ಲೆಕ್ಸ್​ ಹರಿದ ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿ ನಾಲ್ವರ ಬಂಧನ!

    ಕೆರೆಯಲ್ಲಿ ಕಾರು ಬಿದ್ದಿದ್ದ ಪ್ರಕರಣ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

    ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರು ಫೋಟೋ ಮಿಸ್: ಡಿಕೆಶಿ ಆಕ್ರೋಶ

    ತಿರಂಗಾ ಯಾತ್ರೆಗೆ ಬಂದವರಿಗೆ ಫ್ರೀ ಪೆಟ್ರೋಲ್, ಹೆಲ್ಮೆಟ್ ಆಫರ್ !?: ಪೆಟ್ರೋಲ್ ಬಂಕ್’ಗೆ ಬಂದವರಿಗೆ ಶಾಕ್- Video

    ಅಮೃತ ಮಹೋತ್ಸವಕ್ಕೆ ಟೈಟ್ ಸೆಕ್ಯುರಿಟಿ: ರಾಜಧಾನಿ ಮೇಲೆ ಪೊಲೀಸರ ಹದ್ದಿನ ಕಣ್ಣು

    ಹರ್ ಘರ್ ತಿರಂಗಾ ಅಭಿಯಾನ: ಬೆಂಗಳೂರಿನ ಎಲ್ಲರ ಮನೆಯಲ್ಲೂ ತ್ರಿವರ್ಣ ಧ್ವಜದ ಕಲರವ

    Crime News: ಇಬ್ಬರು ಖತರ್ನಾಕ್ ವಾಹನ ಕಳ್ಳರ ಬಂಧನ!

    ಖಾಸಗಿ ಶಾಲೆಗಳಿಂದ ದೇಶದ್ರೋಹದ ಕೆಲಸ :ರಾಷ್ಟ್ರಧ್ವಜ ಹಾರಿಸದೇ ಭಾರತಾಂಬೆಗೆ ಅಪಮಾನ

    ಪುನೀತ್​​ ಕೆರೆಹಳ್ಳಿ ಬೆಂಬಲಿಗರಿಂದ ರಾತ್ರೋರಾತ್ರಿ ಟಿಪ್ಪು ಬ್ಯಾನರ್​​ ಪೀಸ್​..ಪೀಸ್- Video

    ಟಿಪ್ಪು ಫೋಟೋ ಹರಿದವರನ್ನು ಕೂಡಲೇ ಬಂಧಿಸಿ :​​ಡಿಕೆಶಿ ಕಿಡಿ

    ಬೆಂಗಳೂರು- ನಾಳೆ ಮೆಟ್ರೋದಲ್ಲಿ ಉಚಿತ ಪ್ರಯಾಣ!

    ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

    ಒಡಿಶಾದಿಂದ ಬೆಂಗಳೂರಿಗೆ ಬಂದಿದ್ದ ವಿಶೇಷ ಚೇತನ ನಾಪತ್ತೆ:ಪೋಷಕರ ಗೋಳಾಟ

    https://www.youtube.com/watch?v=8HqvcflixgA&t=53s
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.

    Go to mobile version