ಬೆಂಗಳೂರು:- ಮಂಡ್ಯದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಕೋಮುಗಲಭೆಯಲ್ಲಿ ಕಲ್ಲು ತೂರಾಟಗಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಘರ್ಷಣೆಯ ನಂತರ ಬಂಧಿತರಾಗಿರುವ ಹಿಂದೂ ಸದಸ್ಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಬೆಂಗಳೂರಿನ ಟೌನ್ಹಾಲ್ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಗಣಪತಿ ವಿಗ್ರಹವನ್ನು ಹಿಡಿದುಕೊಂಡೇ ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸ್ ಬಸ್ಗೆ ಹತ್ತಿಸಿ, ಅವರ ಕೈಯಲ್ಲಿದ್ದ ಗಣೇಶ ವಿಗ್ರಹವನ್ನು ಹೊತ್ತುಕೊಂಡು ಪೊಲೀಸ್ ಜೀಪ್ನೊಳಗೆ ಇಟ್ಟುಕೊಂಡಿದ್ದಾರೆ. ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸೆ.12ರಂದು ನಾಗಮಂಗಲ ತಾಲೂಕಿನಲ್ಲಿ ನಡೆದ ನಿಮಜ್ಜನ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ಟೌನ್ಹಾಲ್ ಬಳಿ ಗಣೇಶ ಮೂರ್ತಿ ಹೊತ್ತ ಪ್ರತಿಭಟನಾಕಾರರ ಗುಂಪೊಂದು ಪ್ರತಿಭಟನೆ ನಡೆಸಿತು. ಕಲ್ಲು ತೂರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಘರ್ಷಣೆಯ ನಂತರ ಬಂಧಿಸಲ್ಪಟ್ಟ ಹಿಂದೂ ಸದಸ್ಯರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.
ಆದರೆ, ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಸುಮಾರು 40 ವ್ಯಕ್ತಿಗಳನ್ನು ಬಂಧಿಸಿದರು. ಈ ವೇಳೆ ಗಣೇಶನ ವಿಗ್ರಹವನ್ನು ಪ್ರತಿಭಟನಾಕಾರರಿಂದ ತೆಗೆದುಕೊಂಡು ಪೊಲೀಸ್ ವ್ಯಾನ್ನಲ್ಲಿ ಇರಿಸಲಾಯಿತು. ಇದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಗಣೇಶನ ಮೂರ್ತಿಯನ್ನು ಪೊಲೀಸ್ ವಾಹನದಲ್ಲಿರಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಆದರೆ, ಪ್ರತಿಭಟನಾಕಾರರಿಂದ ವಶಪಡಿಸಿಕೊಂಡು ಪೊಲೀಸ್ ಜೀಪ್ನಲ್ಲಿ ಸುರಕ್ಷಿತವಾಗಿರಿಸಲಾಗಿದ್ದ ಗಣೇಶನ ವಿಗ್ರಹವನ್ನು ಪೊಲೀಸರೇ ವಿಸರ್ಜನೆ ಮಾಡಿದ್ದಾರೆ ಎನ್ನಲಾಗಿದೆ.