ಬೆಂಗಳೂರು:- ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಮೂವರ ಬರ್ಬರ ಹತ್ಯೆಯಾಗಿರುವ ಘಟನೆ ಸರ್ಜಾಪುರ ಬಾಗಲೂರು ರಸ್ತೆಯ ಪೋರ್ ವಾಲ್ಸ್ ಅವೆನ್ಯೂ ಹೆಸರಿನ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಜರುಗಿದೆ.
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ; ಮತ್ತೆ ಮುನ್ನೆಲೆಗೆ ಬಂದ ಇಲವಾಲ ಬಸ್ ದರೋಡೆ ಪ್ರಕರಣ..? ಏನಿದು ಕೇಸ್
ಮೂಲದ ಅನ್ಸು (19), ರಾಧೆಶ್ಯಾಮ್ (20), ದೀಪು (22), ಮೃತಪಟ್ಟರು. ಇವರು ಬಿಹಾರ ಮೂಲದವರು ಎನ್ನಲಾಗಿದೆ. ಹೋಳಿ ಹಬ್ಬದ ಅಂಗವಾಗಿ ಬಿಹಾರ ಮೂಲದ ಕಟ್ಟಡ ಕಾರ್ಮಿಕರಿಗೆ ರಜೆ ನೀಡಲಾಗಿತ್ತು. ಇದೇ ಖುಷಿಯಲ್ಲಿ, ದೊಡ್ಡ ಕನ್ನಲ್ಲಿ ಬಳಿಅಪಾರ್ಟ್ಮೆಂಟ್ನಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದ ತಮ್ಮದೇ ಊರಿನವರನ್ನು ಆರೋಪಿ ಸೋನಾ ಅಂಡ್ ಗ್ಯಾಂಗ್ ಎಣ್ಣೆಪಾರ್ಟಿಗೆ ಕರೆದಿತ್ತು. ಎಣ್ಣೆಪಾರ್ಟಿ ಏಂಜಾಯ್ ಮಾಡಲು ಅನ್ಸು, ದೀಪು, ರಾಧೆಶ್ಯಾಮ್ ಮತ್ತು ಸಹೋದರ ಬೀರಬಲ್ ಸರ್ಜಾಪುರದ ನಿರ್ಮಾಣ ಹಂತದ ಕಟ್ಟಡಕ್ಕೆ ತೆರಳಿದ್ದರು. ಸಂಜೆವರೆಗೆ ಕುಡಿದು ತಿಂದು ಏಂಜಾಯ್ ಮಾಡಿದ್ದರು.
ನಶೆ ನೆತ್ತಿಗೇರುತ್ತಿದ್ದಂತೆ ಓರ್ವ ಎಣ್ಣೆಪಾರ್ಟಿ ಆಯೋಜಿಸಿದ್ದವನ ತಂಗಿಗೆ ಕರೆ ಅಸಭ್ಯವಾಗಿ ಮಾತನಾಡಿದ್ದಾನೆ. ಇದೇ ವಿಚಾರಕ್ಕೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದ್ದು, ಎರಡು ಗ್ಯಾಂಗ್ ನಡುವೆ ಬಡಿದಾಟ ಶುರುವಾಗಿದೆ. ಹೊರಗಿನಿಂದ ಬಂದ ನಾಲ್ವರ ಮೇಲೆ ಸೋನಾ ಅಂಡ್ ಗ್ಯಾಂಗ್ ಕೈಗೆ ಸಿಕ್ಕ ದೊಣ್ಣೆ ಮತ್ತು ಕಬ್ಬಿಣದ ರಾಡ್ನಿಂದ ಅಟ್ಟಾಡಿಸಿ ಹಲ್ಲೆ ನಡೆಸಿದೆ. ನಶೆ ಏರಿದವರ ಏಟಿನ ದಾಳಿಗೆ ಇಬ್ಬರು ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಮೂರನೇ ಮಹಡಿಯಲ್ಲಿ, ಮತ್ತೊಬ್ಬ ಅಪಾರ್ಟ್ಮೆಂಟ್ ಪಕ್ಕದ ಖಾಲಿ ಜಾಗದಲ್ಲಿ ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.
ಸದ್ಯ ಘಟನೆಯಲ್ಲಿ ಹಲ್ಲೆಗೊಳಗಾದ ಬೀರಬಲ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.