ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪತ್ನಿ ಇಬ್ಬನಿ ಜೊತೆ ಹಾಗೂ ಕಾರ್ಯಕರ್ತರ ಸಮೇತ ಆಗಮಿಸಿ ನಾಮಪತ್ರ ಸಲ್ಲಿಸಿದರು. ಶಿಗ್ಗಾಂವಿ ತಹಶಿಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾ ಅಧಿಕಾರಿ ಮಹಮ್ಮದ್ ಖಿಝರ್ಗೆ ನಾಮಪತ್ರವನ್ನ ಸಲ್ಲಿಸಿದರು.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾಯಿ ಹೇಳಿದಂತೆ ಒಳ್ಳೆಯ ಮೂಹರ್ತ ನೋಡಿ ನಾಮಪತ್ರ ಸಲ್ಲಿಸಿದ್ದೇವೆ. ತಂದೆ-ತಾಯಿ ಗುರು ಹಿರಿಯ ಆರ್ಶೀವಾದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ, ಮೆರವಣಿಗೆ ಮೂಲಕ ಆಗಮಿಸಿ ಪಕ್ಷದ ವರಿಷ್ಠರು, ಹಾಗೂ ಯಡಿಯೂರಪ್ಪ ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಸುತ್ತೇವೆ. ಈಗಾಗಲೇ ಮನೆಮನೆಗೆ ಹೋಗಿ ಪ್ರಚಾರ ಮಾಡುತ್ತಿದ್ದೇವೆ. ದೇವಸ್ಥಾನಕ್ಕೂ ಭೇಟಿ ಕೊಟ್ಟಿದ್ದೇನೆ ಎಂದರು.
ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್! 2027 ರೊಳಗೆ ದೇಶದ 11 ಕೋಟಿ ರೈತರಿಗೆ ‘ಡಿಜಿಟಲ್ ಐಡಿ’ ಕಾರ್ಡ್
ಗುರು-ಹಿರಿಯರನ್ನು ಭೇಟಿ ಮಾಡಿ ಮತಯಾಚನೆ ಮಾಡಿದ್ದೇನೆ. ತಂದೆ ಮಾಡಿದ ಅಭಿವೃದ್ಧಿ ಕಾರ್ಯಗಳನ್ನ ಮುಂದುವರೆಸಿಕೊಂಡು ಹೋಗುತ್ತೇನೆ. 2023 ರಲ್ಲಿ ನಮ್ಮ ತಂದೆಯ ಪರವಾಗಿ ಮತಯಾಚನೆ ಮಾಡಿದ್ದೆ. ಈಗ ಪಕ್ಷ ನನಗೆ ಟಿಕೆಟ್ ನೀಡಿದೆ. ನಾನೇ ಮತಯಾಚನೆ ಮಾಡುತ್ತಿದ್ದೇನೆ. ಈ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಪ್ರಣಾಳಿಕೆ ಸಹ ಬಿಡುಗಡೆ ಮಾಡುತ್ತೇವೆ ಎಂದರು.