ಬೆಂಗಳೂರು:– ಕಾಂಗ್ರೆಸ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು ಎಂದು ಹೇಳುವ ಮೂಲಕ ಬಿಜೆಪಿ ಕಿಡಿಕಾರಿದೆ.
ಮೂರನೇ ಬಾರಿಗೆ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ, ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಗುಂಪೊಂಡು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿ, ಚೂರಿಯಿಂದ ಇರಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನನಲ್ಲಿ ನಡೆದಿತ್ತು. ಈ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ರಾಜ್ಯದಲ್ಲಿ ತುಘಲಕ್ ಆಡಳಿತ ಮರಳಿದೆ ಎಂದು ಟೀಕಿಸಿದೆ.
ಘಟನೆಗೆ ಸಂಬಂಧಿಸಿ x ಮಾಡಿರುವ ಅಶೋಕ್, ಇದೇನು ಕಾಶ್ಮೀರವೋ ಅಥವಾ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಆಗಿದೆಯೋ ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ತಾಲಿಬಾನ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು. ರಾಮನ ಹೆಸರು ಹೇಳುವುದೂ ತಪ್ಪು, ಭಾರತ್ ಮಾತಾ ಕೀ ಜೈ ಎಂದರೂ ತಪ್ಪು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರ ಮೇಲೆ ಕಠಿಣ ಕ್ರಮ ಕೈಗೊಂಡು ಜೈಲಿಗಟ್ಟಿದ್ದರೆ ಇವತ್ತು ಭಾರತ್ ಮಾತಾ ಕಿ ಜೈ ಎನ್ನುವವರ ಮೇಲೆ ಕಲ್ಲು ತೂರುವ ಧೈರ್ಯ ಮಾಡುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ತಮ್ಮ ಸರ್ಕಾರ ಬಂದಾಗಿನಿಂದ ಮತಾಂಧರಿಗೆ, ತೀವ್ರವಾದಿ ಸಂಘಟನೆಗಳಿಗೆ ಕೊಂಬು ಬಂತಾಗಿದ್ದು, ದೇಶವಿದ್ರೋಹಿ ಘಟನೆಗಳು ಪದೇ ಪದೇ ನಡೆಯುತ್ತಲೇ ಇವೆ. ನಿಮ್ಮ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಮುಸ್ಲಿಂ ಮತಾಂಧ ಮುಳ್ಳುಗಳೇ ಹೆಚ್ಚಾಗಿದ್ದು, ಹಿಂದೂಗಳಿಗೆ, ದೇಶಪ್ರೇಮಿಗಳಿಗೆ ನೆಮ್ಮದಿ ಇಲ್ಲದಂತಾಗಿದೆ’ ಎಂದು ಅಶೋಕ್ ಉಲ್ಲೇಖಿಸಿದ್ದಾರೆ