ಬೆಂಗಳೂರು: ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ (Bharath Brand) ಅಕ್ಕಿ ಗ್ರಾಹಕರಿಗೆ ಆನ್ಲೈನ್ಲೂ (Online) ಸಹ ಸಿಗಲ್ಲಿದ್ದು, ನಗರದಲ್ಲಿಯೂ ಅಕ್ಕಿ ಸಿಗಲಿದೆ
ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ಈ ಹಣದುಬ್ಬರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ತಂದತಹ ಭಾರತ್ ಅಟ್ಟಾ ಹಾಗೂ ಕಡಲೆ ಬೇಳೆಗೆ ಸಿಲಿಕಾನ್ ಸಿಟಿಯ ಜನರಿಂದ ಭರ್ಜರಿ ಪ್ರಿತಿಕ್ರಿಯೆ ಬಂದಿತ್ತು. ನಗರದಲ್ಲಿ 2,81,572 ಕೆ.ಜಿ ಭಾರತ್ ದಾಲ್ ಮತ್ತು 1,22,190 ಕೆ.ಜಿ ಗೋಧಿ ವ್ಯಾಪಾರವಾಗಿತ್ತು.
ಇದೀಗ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಅಕ್ಕಿಯನ್ನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್ಸಿಸಿಎಫ್) ಮೂಲಕ ಮಾರಾಟ ಮಾಡಲು ಪ್ಲಾನ್ ಮಾಡಿದೆ. ಈ ಅಕ್ಕಿಯ ವಿತರಣೆ ಮಂಗಳವಾರ (ಫೆ.6) ಆರಂಭವಾಗುವ ಸಾಧ್ಯತೆಯಿದೆ. ಎನ್ಸಿಸಿಎಫ್ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ತಲುಪಿಸುವ ಪ್ಲಾನ್ ಮಾಡಿಕೊಂಡಿದೆ