ಗದಗ: ಹಾಲಿನ ದರ ಏರಿಕೆ ಖಂಡಿಸಿ ಗದಗ ಜಿಲ್ಲಾಡಳಿತ ಭವನದ ಎದುರು ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
Gadaga: ಮುಂಡರಗಿಯಲ್ಲಿ ಬೃಹತ್ ರಕ್ತದಾನ ಶಿಭಿರ, ಪರಿಸರ ದಿನಾಚರಣೆ..!
ಇದೇ ವೇಳೆ ಪ್ರತಿಭಟನಾಕಾರರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ರೈತರ ಹೆಸರನ್ನ ಹೆಳಿ ಅಧಿಕಾರಕ್ಕೆ ಬಂದಿದೆ ಆದ್ರೆ ರೈತರಿಗೆ ವಂಚನೆ ಮಾಡ್ತಿದೆ.
ಹಾಲಿನ ದರ ಏರಿಕೆ ಮಾಡಿದ್ದಾರೆ ಆದ್ರೆ ರೈತರಿಗೆ ಸಿಗಬೇಕಾದ ಪ್ರೋತ್ಸಾಹ ಧನ ಒಂದು ವರ್ಷದಿಂದ ಮುಟ್ಟಿಲ್ಲ ಜೊತೆಗೆ ಬೆಲೆ ಏರಿಕೆ ಕಾಂಗ್ರೆಸ್ ಪಕ್ಷದಿಂದ ಬಳುವಳಿಯಾಗಿದೆ.
ಹಿಂದೆ ಕಿಸಾನ್ ಸಮ್ಮಾನ್ ನಿಧಿಯಲ್ಲಿ ಕೇಂದ್ರದ 6ಸಾವಿರ ಜೊತೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ 4 ಸಾವಿರ ಸೇರಿಸಿ 10ಸಾವಿರ ರೂಪಾಯಿ ನೀಡಲಾಗ್ತಿತ್ತು. ಆದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೆಲೆ 4ಸಾವಿರ ಕಡಿತಗೋಳಿಸಿ ರೈತರಿಗೆ ಅನ್ಯಾಯ ಮಾಡ್ತಿದೆ. ಜೊತೆಗೆ ರೈತ ಮಕ್ಕಳ ವಿಧ್ಯಾ ನಿಧಿ ಯೋಜನೆಯನ್ನು ಸ್ಥಗಿತಗೊಳಿಸಿದೆ.
ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಬರೆ ಎಳೆಯಲಾಗುತ್ತಿದೆ. ಸಿದ್ರಮಾಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ಬೇಕು ಅಂತ ಪ್ರತಿಭಟನಾಕಾರರು ಆಗ್ರಹಿಸಿದ್ರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ, ಮುಖಂಡರಾದ ಅಶೋಕ ಸಂಕಣ್ಣವರ ಸೇರಿದಂತೆ ಕಾರ್ಯಕರ್ತರು ಇದ್ರು.
![](https://ainlivenews.com/wp-content/uploads/2024/01/Ad-Banner-copy-scaled.jpg)