ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ ನಂ 30ರ ರೇಣುಕಾ ನಗರ, ಗಾಂಧಿ ನಗರ, ರಾಮಕೃಷ್ಣ ನಗರ, ಸೆಂಟ್ರಲ್ ಎಕ್ಸಸೈಜ್ ಕಾಲೋನಿಯ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿ ಮಾಡುವ ಕಾಮಗಾರಿಗೆ ಮತ್ತು
ರೇಣುಕಾ ನಗರ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ, ವಾರ್ಡಿನ ಹಿರಿಯರು, ಪ್ರಮುಖರು, ಯುವಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು