ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಪಿತೃಪಕ್ಷದ ಊಟಕ್ಕೆ ಹೋಗಲು ವ್ಯಕ್ತಿಯೊಬ್ಬ ಪೊಲೀಸ್ ಜೀಪ್ ಕರೆಸಿಕೊಂಡಿರುವ ಘಟನೆ ನಡೆದಿದೆ. 112 ಗೆ ಫೋನ್ ಮಾಡಿದ ವ್ಯಕ್ತಿ, ‘ಸರ್… ಗಲಾಟೆ ನಡೀತಿದೆ.. ಬೇಗ ಬನ್ನಿ’ ಅಂತಾ ಮನವಿ ಮಾಡಿದ್ದ. ಸ್ಥಳಕ್ಕೆ ಬಂದ ಪೊಲೀಸರಿಗೆ ಮಾವನ ಮನೆಗೆ ಡ್ರಾಪ್ ಮಾಡುವಂತೆ ಕೇಳಿಕೊಂಡಿದ್ದಾನೆ.
ಗಾಡಿ ಯಾವು ಇಲ್ಲ… ಮಳೆ ಬೇರೆ, ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ಪೊಲೀಸರ ಬಳಿ ವ್ಯಕ್ತಿ ಮನವಿ ಮಾಡಿದ್ದಾನೆ. ಇದರಿಂದ ಪೆಚ್ಚಾದ ಪೊಲೀಸರು, ಆ ವ್ಯಕ್ತಿಗೆ ಬೈಯ್ಯಬೇಕೋ ಅಥವಾ ನಗಬೇಕೋ ತಿಳಿಯದೇ ಸುಮ್ಮನಾದರು.
ಒಣ ಖರ್ಜೂರ ಸೇವಿಸುವುದರಿಂದ ಈ ಎಲ್ಲಾ ಆರೋಗ್ಯಕರ ಪ್ರಯೋಜನಗಳು ಇವೆ ನೋಡಿ!
ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ತರುವೆ ಗ್ರಾಮದಲ್ಲಿ ಗಲಾಟೆ ನಡೆಯುತ್ತಿದೆ ಎಂದು ಅದೇ ಗ್ರಾಮದ ಅಶೋಕ್ ಎಂಬ ವ್ಯಕ್ತಿ, ಪೊಲೀಸರಿಗೆ ಫೋನ್ ಮಾಡಿದ್ದ. ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್ಗೆ ಪೊಲೀಸರು ಬುದ್ದಿಮಾತು ಹೇಳಿದ್ದಾರೆ. ಕೊನೆಗೆ ಪೊಲೀಸರು, ಲಾರಿಯೊಂದಕ್ಕೆ ಅಡ್ಡ ಹಾಕಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದ್ದಾರೆ.