ಕಂಪ್ಲಿ: ಕುರುಗೋಡು ದೊಡ್ಡ ಬಸವೇಶ್ವರ ಜಾತ್ರೆ ಪ್ರಯುಕ್ತ ಕಂಪ್ಲಿ ಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕುರುಗೋಡು ದೊಡ್ಡ ಬಸವೇಶ್ವರ ಜಾತ್ರೆಗೆ ಮೂರನೇ ವರ್ಷ ಪಾದಯಾತ್ರೆಗೆ ಕಂಪ್ಲಿ ಶಾಸಕ ಜೆಎನ್ ಗಣೇಶ್ ಚಾಲನೆ ನೀಡಿದರು.
ಕಂಪ್ಲಿ ಪೇಟೆ ಬಸವೇಶ್ವರ ದೇವಸ್ಥಾನದಿಂದ ಕುರುಗೋಡು ದೊಡ್ಡ ಬಸವೇಶ್ವರ ದೇವಸ್ಥಾನ ವರಿಗೆ ಪಾದಯಾತ್ರೆ ನಡೆಯಿತು. ಪಾದಯಾತ್ರೆಯಲ್ಲಿ ಶಾಸಕರೂ ಭಾಗಿಯಾಗಿದ್ದರು.
100 ರಿಂದ 150 ಜನ ಪಾದಯಾತ್ರೆಯಲ್ಲಿ ಶಾಸಕರಿಗೆ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಕಂಪ್ಲಿ ತಾಲೂಕು ಮಟ್ಟದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕುರುಗೋಡು ದೊಡ್ಡ ಬಸವೇಶ್ವರ ಜಾತ್ರೆ ಪ್ರಯುಕ್ತ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು