ಬೆಂಗಳೂರು:– ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಗೆ ದೀಪಾವಳಿ ಗೀಫ್ಟ್ ಸಿಕ್ಕಿದ್ದು, ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಿದೆ.
ಚುನಾವಣೆ ವೇಳೆ ಚುನಾವಣಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ್ದರೆ ಎಂದು ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಪ್ರಕರಣದ ದೂರನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿ ಆದೇಶಿಸಿದೆ.
ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿದ್ದ ಎಸ್.ಆನಂದ ಎಂಬುವವರು ಕುಮಾರಸ್ವಾಮಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಅವರ ದೂರನ್ನು ನ್ಯಾಯಾಲಯ ರದ್ದುಗೊಳಿಸುವ ಮೂಲಕ ಬಿಗ್ ರಿಲಿಫ್ ನೀಡಿದೆ.
ಚುನಾವಣಾಧಿಕಾರಿಗಳಿಗೆ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಎರಡನೇ ಪತ್ನಿ ವಿವರಗಳನ್ನು ಮತ್ತು ಮಕ್ಕಳ ಮಾಹಿತಿಯನ್ನು ಚುನಾವಣಾ ಪ್ರಮಾಣದಲ್ಲಿ ಪತ್ರದಲ್ಲಿ ತಿಳಿಸಿಲ್ಲವೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.