ಬೆಂಗಳೂರು:- ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ.
Renukaswamy murder Case: ಎಲ್ಲಾ ನನ್ನಿಂದಲೇ ಆಗಿದ್ದು, ಜೈಲಲ್ಲೇ ಕಣ್ಣೀರು ಹಾಕುತ್ತಿರುವ ಪವಿತ್ರಾ ಗೌಡ..!
ಈ ಹಿಂದೆ 50 ರೂ. ಅಸುಪಾಸಿನಲ್ಲಿ ಸಿಗುತ್ತಿದ್ದ ತರಕಾರಿಗಳು ಇದೀಗ 100 ರೂ. ಗಡಿ ದಾಟಿದ್ದು, ತರಕಾರಿ ತೆಗೆದುಕೊಳ್ಳಬೇಕು ಎಂದರೆ ಯೋಚನೆ ಮಾಡಬೇಕಾದ ಅನಿವಾರ್ಯತೆ ಶುರುವಾಗಿದೆ. ಸದ್ಯ ರಾಜಾಧಾನಿಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಬಂದಂತಹ ಬೆಳೆಯೂ ಹಾಳಾಗುತ್ತಿದೆ. ಜೊತೆಗೆ ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ತರಕಾರಿಗಳು ಸಿಗದ ಪರಿಣಾಮ ತರಕಾರಿ ಬೆಲೆ ಏರಿಕೆಯಾಗಿದೆ.
ಕಳೆದ ತಿಂಗಳು ಬಿಸಿಲಿನ ಪ್ರಮಾಣ ಜಾಸ್ತಿ ಇದೆ ಎನ್ನುವ ಕಾರಣಕ್ಕೆ ತರಕಾರಿಗಳ ಬೆಲೆ ಜಾಸ್ತಿಯಾಗಿತ್ತು. ಇದೀಗ ಮಳೆ ಎನ್ನುವ ಕಾರಣಕ್ಕೆ ತರಕಾರಿಗಳ ಬೆಲೆ ಜಾಸ್ತಿಯಾಗಿದೆ. ವ್ಯಾಪಾರಸ್ಥರಿಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆಯಾಗುತ್ತಿಲ್ಲ. ಸದ್ಯ ಕೇವಲ ಕರ್ನಾಟಕದ ಜಿಲ್ಲೆಗಳಿಂದ ಮಾತ್ರ ತರಕಾರಿ ಪೂರೈಕೆಯಾಗುತ್ತಿದೆ. ಜೊತೆಗೆ ಮಳೆಗೆ ಟೊಮೆಟೋ ಹಾಗೂ ಈರುಳ್ಳಿ ಸರಿಯಾಗಿ ಫಸಲು ಬರುತ್ತಿಲ್ಲ. ಈ ಕಾರಣದಿಂದಾಗಿ ತರಕಾರಿಗಳ ಬೆಲೆ ಜಾಸ್ತಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪರಸ್ಥರು ಅಭಿಪ್ರಾಯಪಟ್ಟಿದ್ದಾರೆ.