ಮಂಡ್ಯ: ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ಧಾರುಣ ಘಟನೆ ನಡೆದಿತ್ತು. ಪೂಜಾ ಮತ್ತು ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ತ್ರಿಶುಲ್ ಹಾಗೂ ತ್ರಿಶಾ ಸಾವನ್ನಪ್ಪಿದ ಮಕ್ಕಳು. ತಳ್ಳುವ ಗಾಡಿಯಲ್ಲಿ ಐಸ್ ಕ್ರೀಂ ತೆಗೆದುಕೊಂಡು ತಾಯಿ ಪೂಜಾ ಸೇರಿದಂತೆ ಇಬ್ಬರು ಮಕ್ಕಳು ಕೂಡ ಸೇವಿಸಿದ್ದಾರೆ. ಆ ನಂತರ ಮಕ್ಕಳು ಅಸ್ವಸ್ಥವಾಗಿದ್ದರು ಎಂದು ಆರೋಪಿಸಲಾಗಿತ್ತು.
ಇದೀಗ ತಾಯಿಯೇ ವಿಷ ಹಾಕಿರುವುದು ವಿಚಾರಣೆ ಬಳಿಕ ತಿಳಿದು ಬಂದಿದೆ. ಘಟನೆ ಕುರಿತು ಪೊಲೀಸ್ ವಿಚಾರಣೆ ಬಳಿಕ ಸತ್ಯಾಂಶ ಬಯಲಾಗಿದ್ದು, ತಾಯಿಯೇ ಕೌಟುಂಬಿಕ ಕಲಹದಿಂದ ಮೂರು ಮಕ್ಕಳಿಗೆ ವಿಷ ಉಣಿಸಿರುವುದು ಬಯಲಾಗಿದೆ. ಪೂಜಾ ಪತಿ ಪ್ರಸನ್ನ ಜೊತೆ ಪದೇ ಪದೇ ಜಗಳವಾಡುತ್ತಿದ್ದರು. ಮನೆಯಲ್ಲಿ ಜಗಳ ವಿಕೋಪಕ್ಕೆ ತಿರುಗಿದ್ದು,
Health Care: ಚಪಾತಿ ಹಿಟ್ಟನ್ನು ಪ್ರಿಡ್ಜ್ʼನಲ್ಲಿಟ್ಟು ಬಳಕೆ ಮಾಡಿದ್ರೆ ಈ ಸಮಸ್ಯೆಗಳು ಬರಬಹುದು ಎಚ್ಚರ.!
ಜಗಳದಿಂದ ಬೇಸತ್ತು ನಿನ್ನೆ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾರೆ. ಬಳಿಕ ತಾನೂ ಸೇವಿಸಿದ್ದಳು, ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು. ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ಮುಂದುವರಿದೆ.