ಉತ್ತರ ಪ್ರದೇಶ:– ಬಿಹಾರದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ನೀಲೇಶ್ ರೈ ಎಂಬಾತನನ್ನು ಪೊಲೀಸರು ಎನ್ ಕೌಂಟರ್ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ.
Breaking: ಮಾಜಿ ಸಿಎಂ ಬಿಎಸ್ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ..!
ನೀಲೇಶ್ ರೈ ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನನ್ನು ಹಿಡಿದುಕೊಟ್ಟವರಿಗೆ 2.5 ಲಕ್ಷ ಬಹುಮಾನವನ್ನು ಕೂಡ ಘೋಷಿಸಲಾಗಿತ್ತು. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗಳ ಜಂಟಿ ತಂಡ ಬುಧವಾರ ರಾತ್ರಿ ಎನ್ಕೌಂಟರ್ ನಡೆಸಿದೆ.
ನೀಲೇಶ್ ರೈ ವಿರುದ್ಧ ಕೊಲೆ, ಲೂಟಿ ಮತ್ತು ಸುಲಿಗೆ ಸೇರಿದಂತೆ 16 ಪ್ರಕರಣಗಳು ದಾಖಲಾಗಿತ್ತು. ಯುಪಿ ಎಸ್ಟಿಎಫ್ನ ನೋಯ್ಡಾ ಘಟಕ ಮತ್ತು ಬಿಹಾರ ಎಸ್ಟಿಎಫ್ ಜಂಟಿ ಕಾರ್ಯಾಚರಣೆಯಲ್ಲಿ, ಮುಜಾಫರ್ನಗರದ ರತನ್ಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್ಕೌಂಟರ್ ನಡೆದಿದೆ