ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಿಕ್ಕಿ ಬಿದ್ದಿರೋದು ನಿಜಕ್ಕೂ ಶಾಕಿಂಗ್ ಎನಿಸಿದೆ. ಅಲ್ಲದೇ ಪೊಲೀಸರು ಅವರಿಗೆ ವಿಐಪಿ ಟ್ರೀಟ್ಮೆಂಟ್ ಸಿಕ್ಕಿದ್ದಕ್ಕೆ ಪೊಲೀಸರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಲಾಗಿತ್ತು. ಈ ಬೆನ್ನಲ್ಲೇ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ಗೆ ಅನ್ನ-ಸಾರು ನೀಡಲಾಗಿದೆ.
ಬೆಂಗಳೂರಲ್ಲಿ ಹೆಚ್ಚಾಯ್ತು HIV ಕೇಸ್… ಏಡ್ಸ್ ರೋಗಕ್ಕೆ ತುತ್ತಾಗುತ್ತಿದ್ದಾರೆ ಯುವಕರು!
ದರ್ಶನ್ ಅವರು ಜೂನ್ 11ರಂದು ಅರೆಸ್ಟ್ ಆದರು. ಅಂದು ರಾತ್ರಿ ದರ್ಶನ್ ಹಾಗೂ ಅವರ ಗ್ಯಾಂಗ್ಗೆ ಬಿರಿಯಾನಿ ನೀಡಲಾಗಿತ್ತು. ಜೈಲಿನ ಹೊರ ಭಾಗದಲ್ಲಿ ಬಿರಿಯಾನಿ ಬಾಕ್ಸ್ ಕಾಣಿಸಿತ್ತು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಇದರಿಂದ ಪೊಲೀಸರು ಸಂಕಷ್ಟ ಅನುಭವಿಸಿದ್ದಾರೆ. ಈ ಘಟನೆಯಿಂದ ಅವರು ಎಚ್ಚೆತ್ತುಕೊಂಡಿದ್ದಾರೆ.
ಕೊಲೆ ಆರೋಪಿಗಳಿಗೆ ಬಿರಿಯಾನಿ ನೀಡಿದ್ದಕ್ಕೆ ಪೊಲೀಸರ ವಿರುದ್ಧ ಹಿರಿಯ ಅಧಿಕಾರಿಗಳು ಗರಂ ಆಗಿದ್ದಾರೆ ಎನ್ನುವ ಮಾತೂ ಇದೆ ಎನ್ನಲಾಗಿದೆ. ಬಿರಿಯಾನಿ ನೀಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಅನೇಕರು ಇದನ್ನು ಟೀಕಿಸುತ್ತಿದ್ದಾರೆ.