ಬೆಂಗಳೂರು:- ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯವು ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಫೆ.13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪ್ರಶಾಂತ್ ಬಾಬು, ಸಂತೋಷ್ ಬಂಧಿತರು. ಬಿಟ್ ಕಾಯಿನ್ ಪ್ರಕರಣ ಸಂಬಂಧ ಇಬ್ಬರನ್ನು ಎಸ್ಐಟಿ ಬಂಧಿಸಿತ್ತು. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಆರು ದಿನಗಳ ಕಾಲ ಆರೋಪಿಗಳನ್ನು ಎಸ್ಐಟಿ ಕಸ್ಟಡಿಗೆ ಪಡೆದುಕೊಂಡಿತ್ತು. ಇಂದಿಗೆ ಆರೋಪಿಗಳ ಕಸ್ಟಡಿ ಅಂತ್ಯವಾಗಿದ್ದು, ಎಸಿಎಂಎಂ 1ನೇ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.
ಅಷ್ಟಕ್ಕೂ ಚುನಾವಣೆಗೂ ಮುನ್ನ ಕಾಂಗ್ರೆಸ್ ಬಿಟ್ ಕಾಯಿನ್ ಪ್ರಕರಣವನ್ನ ಅಸ್ತ್ರ ಮಾಡಿಕೊಂಡಿತ್ತು. ಬಿಜೆಪಿ ವಿರುದ್ಧ ಸರಣಿ ಆರೋಪ ಮಾಡುತ್ತಿತ್ತು. ಈ ಆರೋಪದ ಸತ್ಯ ಶೋಧನೆಗೆ ಎಂದು 2023ರ ಜುಲೈನಲ್ಲಿ ಕಾಂಗ್ರೆಸ್ ಸರ್ಕಾರ, SIT ರಚನೆ ಮಾಡಿತ್ತು. ಆಗ ಕಾಟನ್ ಪೇಟೆ ಠಾಣೆಯಲ್ಲಿ ಒಂದು ಕೇಸ್ ದಾಖಲು ಮಾಡಿದ್ದರು
ಆರೋಪಿಗಳ ಹೆಸರು ಪ್ರಸ್ತಾಪಿಸದೇ ತನಿಖೆ ಶುರುಮಾಡಿತ್ತು. ಇತ್ತೀಚೆಗೆ ಮತ್ತೊಂದು FIR ದಾಖಲು ಮಾಡಲಾಗಿತ್ತು. ಇಷ್ಟೇ ಅಲ್ಲ, ಪ್ರಕರಣದಲ್ಲಿ ಸಂತೋಷ್ ಮತ್ತು ಪ್ರಶಾಂತ್ ಬಾಬುರನ್ನು ಬಂಧಿಸಲಾಗಿತ್ತು. ಇಬ್ಬರನ್ನ ಜನವರಿ 31 ರ ತನಕ SIT ತಮ್ಮ ವಶಕ್ಕೆ ಪಡೆದಿತ್ತು.