ಮೈಸೂರು:– ಇಂದು ಬೆಳಗ್ಗಿನ ಜಾವ ಮೈಸೂರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮೈಸೂರಿಗೆ ಆಗಮಿಸಿದ್ದಾರೆ.
ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮುಂಜಾನೆ 3 ಗಂಟೆಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ತೆರಳಿ ಱಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಱಡಿಸನ್ ಬ್ಲೂ ಹೋಟೆಲ್ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕತ್ತು ಕೊಯ್ದು ಮಹಿಳೆಯ ಬರ್ಬರ ಕೊಲೆ!? – ಬಳಿಕ ಪ್ರಿಯಕರ ಮಾಡಿದ್ದೇನು ಗೊತ್ತಾ!?
ಅಮಿತ್ ಶಾ ಆಗಮನಕ್ಕೂ ಮುನ್ನ ಅವರು ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಮೈಸೂರು-ನಂಜನಗೂಡು ರಸ್ತೆ ಮಧ್ಯೆ ಹಾಕಲಾಗಿದ್ದ ಬ್ಯಾರಿಕೇಡ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿಯಾಗಿದೆ. ತಕ್ಷಣ ಪೊಲೀಸರು ಆ್ಯಂಬುಲೆನ್ಸ್ ಕರೆಸಿ ಗಾಯಾಳವನ್ನು ಆಸ್ಪತ್ರೆಗೆ ರವಾನಿಸಿದ್ದು, ಅಪಘಾತಕ್ಕೀಡಾಗಿದ್ದ ಕಾರನ್ನು ತೆರವುಗೊಳಿಸಿದ್ದಾರೆ.