ದಾವಣಗೆರೆ: ಬಿಜೆಪಿ ಕುಮ್ಮಕ್ಕಿನಿಂದ ಪಕ್ಷೇತರವಾಗಿ ಸ್ಪರ್ಧಿಸಿರುವ ವಿನಯ್ ಕುಮಾರ್ಗೆ ಒಂದೂ ಮತ ಹಾಕಬೇಡಿ. ವಿನಯ್ಗೆ ಬೀಳುವ ಮತ ಬಿಜೆಪಿಗೆ ಬಿದ್ದ ಹಾಗೆ ಎಂದು ಸಿಎಂ ಸಿದ್ದರಾಮಯ್ಯ ಕರೆಕೊಟ್ಟಿದ್ದಾರೆ. ಪ್ರಜಾಧ್ವನಿ-2 ಜನಸಮಾವೇಶ ಉದ್ಘಾಟಿಸಿ ಸಿಎಂ ಮಾತನಾಡಿದರು. ಬಿಜೆಪಿ ಸೋತಾಗಿದೆ. ಮೋದಿ ಮತ್ತೆ ಪ್ರಧಾನಿಯಾಗಲ್ಲ. ಇಲ್ಲಿ ಗಾಯತ್ರಿ ಸಿದ್ದೇಶ್ವರ್ ಯಾವುದೇ ಕಾರಣಕ್ಕೂ ಗೆಲ್ಲಲ್ಲ.
ಬಿಜೆಪಿ ಕುಮ್ಮಕ್ಕಿನಿಂದ ಪಕ್ಷೇತರವಾಗಿ ಸ್ಪರ್ಧಿಸಿರುವ ವಿನಯ್ ಕುಮಾರ್ಗೆ ಒಂದೂ ಮತ ಹಾಕಬೇಡಿ. ವಿನಯ್ ಗೆ ಬೀಳುವ ಮತ ಬಿಜೆಪಿಗೆ ಬಿದ್ದ ಹಾಗೆ. ಕಾಂಗ್ರೆಸ್ ಪಕ್ಷದ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಶಕ್ತಿ ಬರುತ್ತದೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳಿದರು.
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ಎರಡು ಬಾರಿ ಮುಖ್ಯಮಂತ್ರಿಯಾಗಿ ತಾವು ರಾಜ್ಯದಲ್ಲಿ ಜಾರಿಮಾಡಿದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು, ಭಾಗ್ಯಗಳ ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ನೀವು ಪ್ರಧಾನಿಯಾಗಿ ಮಾಡಿದ ಸಾಧನೆಗಳನ್ನು ತಾಕತ್ತಿದ್ದರೆ ಭಾರತೀಯರ ಮುಂದೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು.