ಬೆಂಗಳೂರು: ಹರಿಯಾಣದಲ್ಲಿ ಬಿಜೆಪಿಗೆಲುವು ನಮಗೆ ಸ್ಪಷ್ಟವಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 28 ರಿಂದ 32 ಸ್ಥಾನಗಳು ಬರಲಿದೆ ಎಂದು ನಮ್ಮ ಸಮೀಕ್ಷೆ ಹೇಳಿತ್ತು. ಆದ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಫಾರ್ಮುಲಾ ಸಕ್ಸಸ್ ಆಗಿದೆ ಅನ್ನಿಸುತ್ತಿದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.
ಫಲಿತಾಂಶ ಏನೇ ಬಂದರೂ ಚುನಾವಣಾ ಆಯೋಗ ದೂರೋದು, ಇವಿಎಂ ದೂರೋದು, ಜನ ಸರಿಯಿಲ್ಲ ಅಂತ ಇದುವರೆಗೆ ನಾವು ಮಾಡಿಲ್ಲ. ಕಾಂಗ್ರೆಸ್ನವರು ಅವರ ಪರ ಬಂದರೆ ಜನಾದೇಶ. ಇಲ್ಲದಿದ್ದರೇ ಇವಿಎಂ ದೋಷ. ಜನ ಸರಿಯಿಲ್ಲ ಅಂತಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಮತ ಚಲಾವಣೆ ಆಗಿದೆ. ಆ ಮೂಲಕ ಅಲ್ಲಿನ ಜನ ನಾವು ಭಾರತದ ಜೊತೆಗೆ, ಪ್ರಜಾಪ್ರಭುತ್ವದ ಜೊತೆ ಇದ್ದೇವೆ ಎಂದು ತೋರಿಸಿದ್ದಾರೆ. ಹಾಗಾಗಿಯೇ ಇದು ಪ್ರಜಾಪ್ರಭುತ್ವದ ಜಯ. ಜನ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟು ಭಯೋತ್ಪಾದನೆಯ ವಿರುದ್ಧ ಮತ ಚಲಾಯಿಸಿದ್ದಾರೆ. ಇದು ಭಾರತದ ಜಯ ಎಂದು ಹೇಳಿದರು