ಬೆಂಗಳೂರು:- MP ಎಲೆಕ್ಷನ್ ನಲ್ಲಿ ಬಿಜೆಪಿಗೆ 400 ಸೀಟುಗಳು ಸಿಗುವುದು ಖಚಿತ ಎಂದು ಭೂಪೇಂದ್ರ ಯಾದವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು ಎಂದರು
ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈಗಾಗಲೇ ಕೆಲಸ ಆರಂಭಿಸಿದ್ದಾರೆ ಎಂದ ಕೇಂದ್ರ ಸಚಿವರು, ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್ನ ಸುಳ್ಳುಗಳು ಜನರಿಗೆ ಗೊತ್ತಾಯಿತು. ಹಾಗಾಗಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಹೀನಾಯ ಸೋಲಾಯಿತು. ಕಾಂಗ್ರೆಸ್ನ ಗ್ಯಾರಂಟಿಗಳು ವಿಫಲವಾಗಿವೆ ಎಂದರು. ಕಾಂಗ್ರೆಸ್ ಕೇವಲ ಗಾಂಧಿ ಪರಿವಾರ ಹಾಗೂ ಅಲ್ಪಸಂಖ್ಯಾತರಿಗೆ ಸೀಮಿತವಾಗಿ ಅಧಿಕಾರ ಮಾಡಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಗೆಲ್ಲೋದು ಪಕ್ಕಾ ಎಂದರು.