ಬೆಂಗಳೂರು : ಬಿಜೆಪಿ ಸದಸ್ಯರು ನಾಥೂರಾಮ್ ಗೋಡ್ಸೆ ಮಂದಿರ ಕಟ್ಟಬೇಕು, ಪೂಜೆ ಮಾಡಬೇಕು ಎಂದು ಹೇಳ್ತಾರೆ. ಮಹಾತ್ಮ ಗಾಂಧಿ ಪುತ್ಥಳಿ ಮಾಡಿ ಅದಕ್ಕೆ ಗುಂಡು ಹಾರಿಸುವವರ ಜೊತೆಗೆ ಬಿಜೆಪಿ ಇದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಟೀಕಿಸಿದರು.
ತೆರೆದ ಕೊಳವೆ ಬಾವಿಗೆ ಬಿದ್ದು ಸಾವು ಗೆದ್ದು ಬಂದ ಸಾತ್ವಿಕ್ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಟ್ವೀಟ್!
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಹುತ್ವ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರು. ಸಂವಿಧಾನ ರಕ್ಷಣೆ ಮಾಡುವವರು, ಅವರು ಸಂವಿಧಾನ ವಿರೋಧಿಗಳು ಎಂದು ಕುಟುಕಿದರು.
ಕೇರಳದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಸ್ಡಿಪಿಐ ಬೆಂಬಲ ವಿಚಾರವಾಗಿ ಮಾತನಾಡಿ, ಕೇರಳದಲ್ಲಿ ಎಸ್ಡಿಪಿಐ ಬೆಂಬಲವನ್ನು ನಾವು ಕೋರಿಲ್ಲ. ಬದಲಾಗಿ, ಅವರೇ ಕೊಟ್ಟರೆ ನಾವೇನು ಮಾಡಲು ಆಗಲ್ಲ. ಕೋಮುವಾದಿ ಪಕ್ಷವನ್ನು ಸೋಲಿಸಲು ಬೆಂಬಲ ಕೊಟ್ಟರೆ ಅದು ಅವರಿಗೆ ಬಿಟ್ಟಿದ್ದು. ನಾವು ಅವರ ಬೆಂಬಲ ಕೋರಿಲ್ಲ. ಕೇರಳದಲ್ಲಿ ಯಾರ ಜೊತೆಯೂ ಮೈತ್ರಿ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.