ಬೆಂಗಳೂರು:- ರಾಜ್ಯದಲ್ಲಿರುವ ಬಿಜೆಪಿ MP ಗಳು ನಾಲಾಯಕ್ ಗಳು CM ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಬಜೆಟ್ಗಿಂತ 46,630 ಕೋಟಿ ರೂ. ಬಜೆಟ್ ಗಾತ್ರ ಹೆಚ್ಚಳವಾಗಿದೆ. ಗ್ಯಾರಂಟಿಗಳಿಂದ ಆರ್ಥಿಕ ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಬಿಟ್ಟಿ ಗ್ಯಾರಂಟಿ ಕೊಟ್ಟಿದ್ದರಿಂದ ಆರ್ಥಿಕ ದಿವಾಳಿ ಅಂತಿದ್ದಾರೆ. ಅಭಿವೃದ್ಧಿ ಕೆಲಸಗಳಿಗೂ ನಾವು ಅನುದಾವನ್ನು ಕೊಟ್ಟಿದ್ದೇವೆ. ಬರ ಹಿನ್ನೆಲೆ ಕೇಂದ್ರದ ಬಳಿ 18,171 ಕೋಟಿ ರೂ. ಕೇಳಿದ್ದೇವೆ. ಇದುವರೆಗೂ ಕೇಂದ್ರದಿಂದ ಒಂದು ರೂಪಾಯಿ ಸಹ ಬಂದಿಲ್ಲ. ಇದುವರೆಗೂ ಒಂದು ಮೀಟಿಂಗ್ ಕೂಡ ಮಾಡಿಲ್ಲ, ರಾಜ್ಯದಲ್ಲಿ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರದಿಂದ ಇಲ್ಲಿವರೆಗೆ 1 ರೂಪಾಯಿ ಕೊಟ್ಟಿಲ್ಲ. ನಾವು ಸುಳ್ಳು ಹೇಳಿದ್ರೆ ರಾಜ್ಯಪಾಲರು ಓದುತ್ತಿದ್ದರಾ? ಬಜೆಟ್ ಕೇಳುವುದಕ್ಕೆ ಆಗದೇ ವಿಲವಿಲ ಒದ್ದಾಡಿ ಎದ್ದೋದ್ರು. ಕೋಲೆ ಬಸವನ ತರ ಅಲ್ಲಾಡಿಸುತ್ತಾರೆ. ಆದ್ರೆ, ಅಲ್ಲಿ ಕೇಳಲ್ಲ. ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಕೇಂದ್ರಕ್ಕೆ ಕೇಳಲ್ಲ. ಪಾರ್ಲಿಮೆಂಟ್ನಲ್ಲಿ ಯಾವತ್ತಾದರೂ ಮಾತನಾಡಿದ್ದಾರಾ? ಇವರು ಎಂಪಿಗಳಾವುದಕ್ಕೇ ನಾಲಾಯಕ್ ಎಂದು ಕರ್ನಾಟಕ ಬಿಜೆಪಿ ಸಂಸದರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ನಾವು ಅಧಿಕಾರಕ್ಕೆ ಬಂದು ಇನ್ನೂ 9 ತಿಂಗಳು ಕೂಡ ಆಗಿಲ್ಲ. ನಾವು ಜನರಿಗೆ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಕೃಷಿ, ಗ್ರಾಮೀಣಾಭಿವೃದ್ಧಿ, ಇಂಧನ ಕ್ಷೇತ್ರಕ್ಕೆ ಹಣ ಒದಗಿಸಿದ್ದೇವೆ. ಬಜೆಟ್ನಲ್ಲಿ ಎಲ್ಲಾ ಸಮುದಾಯಗಳಿಗೂ ಶಕ್ತಿ ತುಂಬಲಾಗಿದೆ .ಬಜೆಟ್ನಲ್ಲಿ ಏನಿಲ್ಲ ಏನಿಲ್ಲ ಎಂದು ಬಿಜೆಪಿಗರು ಹೇಳುತ್ತಾರೆ. ಅವರ ತಲೆಯಲ್ಲಿ ಏನಿಲ್ಲ. ಅವರ ತಲೆಯಲ್ಲಿ ಮಂಜು ತುಂಬಿದೆ ಕಾಮಾಲೆ ರೋಗದವರಿಗೆ ಕಾಣುವುದೆಲ್ಲ ಹಳದಿ ಎಂಬಂತೆ. ರಾಜಕೀಯ ಮಾಡಲಿ ಬೇಡ ಅನ್ನಲ್ಲ. ಟೀಕೆ, ಆರೋಪಗಳು ಆರೋಗ್ಯಕರವಾಗಿರಬೇಕು. ಬಿಜೆಪಿ ನಾಯಕರು ಏನಿಲ್ಲ ಏನಿಲ್ಲ ಎಂದು ಶುರುಮಾಡಿದ್ರು. ಬಜೆಟ್ ಕೇಳಬಾರದೆಂದು ಪ್ಲ್ಯಾನ್ ಮಾಡಿಕೊಂಡು ಬಂದಿದ್ರು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು
ವಸ್ತುಸ್ಥಿತಿ ಹೇಳಿದ್ರೆ ಇವರಿಗೆ ನುಂಗಲಾರದ ತುತ್ತು. ಇದ್ದಿದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಹೊದ್ದರು ಅಂತ ನಮ್ಮ ಹಳ್ಳಿಕಡೆ ಗಾದೆ ಹೇಳ್ತಾರೆ . ಸತ್ಯ ಹೇಳಿದ್ರೆ ತಡೆದುಕೊಳ್ಳುವುದಕ್ಕೆ ಆಗುವುದಿಲ್ಲ./ ಕರ್ನಾಟಕಕ್ಕೆ ಆದ ಅನ್ಯಾಯ ಹೇಳುವುದು ನನ್ನ ಜವಾಬ್ದಾರಿ, ಕರ್ತವ್ಯ. ಅವರು ಕೋಲೆ ಬಸವ ರೀತಿ ತಲೆ ಅಲ್ಲಾಡಿಸದೆ ಪಾರ್ಲಿಮೆಂಟಿನಲ್ಲಿ ಕೇಳಬೇಕಿತ್ತು. ಮುನಿಸ್ವಾಮಿ ಏನಾದ್ರೂ ಕರ್ನಾಟಕಕ್ಕೆ ಅನ್ಯಾಯವಾದ ಬಗ್ಗೆ ಬಾಯಿ ಬಿಟ್ಟಿದ್ದಾರಾ? ಇಷ್ಟು ಕೊಡಬೇಕಿತ್ತು, ಇಷ್ಟು ಕೊಟ್ಟಿದ್ದಾರೆ ಅಂತ ಪಾರ್ಲಿಮೆಂಟಿನಲ್ಲಿ ಮಾತನಾಡಿದ್ದಾರಾ? ಎಂಪಿ ಆಗೋಕೆ ಲಾಯಕ್ಕಾ? ನಾಲಾಯಕ್ಕಾ? ಒಂದು ದಿನವೂ ಇವರು ಬಾಯಿ ಬಿಡಲಿಲ್ಲ. ಕೇಂದ್ರದಿಂದ ಬರುವ ಹಣ ನ್ಯಾಯಯುತವಾಗಿ ಕೇಳುವುದಕ್ಕೆ ಆಗಲ್ವಾ ಎಂದು ಚಾಟಿ ಬೀಸಿದರು.