ಬೆಳಗಾವಿ: ಹೇಗಾದರೂ ಮಾಡಿ ನನ್ನನ್ನು ಅಧಿಕಾರದಿಂದ ತೆಗೆಯಬೇಕು ಎಂದು ಈಗಲೂ ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಜನರ ಆಶೀರ್ವಾದ ಇರೋವರೆಗೂ ನನ್ನನ್ನು ಯಾರೂ ಅಲ್ಲಾಡಿಸೋಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ 22.45 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿಗರಿಗೆ ನಿರ್ಮಿಸಲಾಗಿರುವ ಕೊಠಡಿಗಳು,
ಡಾರ್ಮಿಟರಿ, ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯಗಳು ಮತ್ತು ಮಹಿಳಾ ಅಭಿವೃದ್ಧಿ ನಿಗಮದಿಂದ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳು ಮತ್ತು ಅತಿಥಿಗೃಹವನ್ನು ಉದ್ಘಾಟಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..!
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು 17 ಸ್ಥಾನ ಗೆದ್ದರು. ನಾವು 9 ಸ್ಥಾನ ಗೆದ್ದೆವು. ಜೆಡಿಎಸ್ 2 ಸ್ಥಾನ ಗೆದ್ದಿತು. ಅವರು ಏನೂ ಮಾಡದೇ ನೀವು ಅವರನ್ನು ಗೆಲ್ಲಿಸುತ್ತೀರಿ. ಏನೂ ಮಾಡದೇ ಬಿಜೆಪಿ ಪ್ರಚಾರ ಪಡೆಯುತ್ತದೆ. ಹಿಂದೂಗಳು, ಹಿಂದುತ್ವದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ನಾಡು ಉಳಿಯಬೇಕಾದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು. ನಮ್ಮ ಸರ್ಕಾರ ಇನ್ನೂ ಮೂರುವರೆ ವರ್ಷ ಇರುತ್ತದೆ. ಆ ಅವಧಿಯಲ್ಲಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು.