ವಿಜಯನಗರ: ”ಪ್ರಧಾನಿ ನರೇಂದ್ರ ಮೋದಿಯವರು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. 10 ವರ್ಷಗಳ ಆಡಳಿತದಲ್ಲಿ ಅಚ್ಛೇ ದಿನ ಬರಲಿಲ್ಲ, ನಿರುದ್ಯೋಗ ಸಮಸ್ಯೆ ನೀಗಲಿಲ್ಲ, 15 ಲಕ್ಷ ರೂ. ಅಕೌಂಟ್ಗೆ ಹಾಕಲಿಲ್ಲ. ಬರೀ ಹಸಿ ಸುಳ್ಳು ಹೇಳುವ ಅವರು ದೇಶದಲ್ಲಿ ಸುಳ್ಳಿನ ಮಾರುಕಟ್ಟೆ ಸೃಷ್ಟಿಸುತ್ತಿದ್ದಾರೆ,” ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.
“ಡಾ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದ ರೈತರ 72 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದರು. ಆದರೆ, ನರೇಂದ್ರ ಮೋದಿಯವರು ತಮ್ಮ ಆಪ್ತರಾದ ಕೆಲವೇ ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಇದರಿಂದ ರೈತರ ಬಗ್ಗೆ ಅವರ ತಾತ್ಸಾರ ತಿಳಿಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ಸೌಮ್ಯ ಸ್ವಭಾವದವರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ತಕ್ಕ ಪಾಠ ಕಲಿಸಿ. ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಬಿಜೆಪಿಯನ್ನು ದೇಶದಿಂದಲೇ ಕಿತ್ತೊಗೆಯಬೇಕು,” ಎಂದು ಆಕ್ರೋಶ ವ್ಯಕ್ತಪಡಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!
‘ಬರ ಇದ್ದರೂ ಪರಿಹಾರ ಬಿಡುಗಡೆಗೆ ಕೋರ್ಟ್ ಮೊರೆ ಹೋಗಬೇಕಾಯಿತು. ಆದರೆ, ಕೇಳಿದ್ದರಲ್ಲಿ ಶೇ. 19ರಷ್ಟು ಮಾತ್ರ ಪರಿಹಾರ ಕೊಟ್ಟಿದ್ದಾರೆ. ಜಿಎಸ್ಟಿ ಪಾಲು ಕೊಡಲು ತಾರತಮ್ಯ ಮಾಡುತ್ತಿದ್ದಾರೆ. ಈ ಮೂಲಕ ರಾಜ್ಯಕ್ಕೆ ಮೋದಿಯವರು ಖಾಲಿ ಚೊಂಬು ಕೊಟ್ಟಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ತಕ್ಕ ಪಾಠ ಕಲಿಸಬೇಕು,” ಎಂದು ಸಿಎಂ ಸಿದ್ದರಾಮಯ್ಯ ಖಾಲಿ ಚೊಂಬು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)