ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಕಸರತ್ತು: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಅನೇಕರ ಅಸಮಾಧಾನಕ್ಕೆ ಗುರಿಯಾಗಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಇಂದು (ಗುರುವಾರ) ಶಾಸಕ ರಮೇಶ್‌ ಜಾರಕಿಹೊಳಿ (Ramesh Jarkiholi) ಮನೆಗೆ ಭೇಟಿ ನೀಡಿದರು. ಆ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ. ಸದಾಶಿವನಗರದ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು. ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು … Continue reading ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಕಸರತ್ತು: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!