ವಿಜಯಪುರ: ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಸಚಿವ ಶರಣ ಪ್ರಕಾಶ ಪಾಟೀಲ್, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಅವರ ಹೇಳಿಕೆಯನ್ನ ಪುನರುಚ್ಛರಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿ, ಸರ್ಕಾರ ಕೆಡವಲು 1000 ಕೋಟಿ ರೂ. ತಯಾರಿ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬಿಜೆಪಿಯಲ್ಲಿ ಅವರೊಬ್ಬ ಪ್ರಮುಖ ನಾಯಕರಿದ್ದಾರೆ. ಅವರಿಗೆ ಏನು ಮಾಹಿತಿ ಇದೆ, ನನಗೆ ಗೊತ್ತಿಲ್ಲ. ಆದ್ರೆ ಸರ್ಕಾರ ಬೀಳಿಸಲು ಬಹಳ ದೊಡ್ಡ ಹಣ ಉಪಯೋಗ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆಯೂ 17 ಶಾಸಕರು ರಾಜೀನಾಮೆ ನೀಡಿದ್ದರು. ಇದೆಲ್ಲ ಹಣಬಲದ ಮೇಲೆ ಆಗಿದೆ. ಈಗಲೂ ಅದೇ ರೀತಿ ಪಿತೂರಿ ನಡೆಯುತ್ತಿರಬಹುದು ಎಂದು ಆಗ್ರಹಿಸಿದರು.
Navratri 2024: ನವರಾತ್ರಿಯ ಐದನೇ ದಿನ: “ಸ್ಕಂದಮಾತೆ”ಯ ಹಿನ್ನೆಲೆಯೇನು.? ಪೂಜೆ ಹೇಗೆ.? ಮಹತ್ವವೇನು..?
ಬಿಜೆಪಿಯವರು 4 ವರ್ಷ 2019 ರಿಂದ 2023ರ ವರೆಗೆ ರಾಜ್ಯವನ್ನ ವ್ಯವಸ್ಥಿತವಾಗಿ ಲೂಟಿ ಹೊಡೆದಿದ್ದಾರೆ. ಅವರು ಮಾಡಿದ ಕೆಲಸ ಕಾರ್ಯಗಳು, ನಡೆದುಕೊಂಡಂತಹ ರೀತಿ ಇದೆಲ್ಲವನ್ನು ನೋಡಿಯೇ ರಾಜ್ಯದ ಜನರು ನಮಗೆ ಬೆಂಬಲ ನೀಡಿದ್ದಾರೆ. 135 ಶಾಸಕರನ್ನ ಆಯ್ಕೆ ಮಾಡುವ ಮುಖಾಂತರ ಸ್ಥಿರ ಸರ್ಕಾರವನ್ನ ರಾಜ್ಯದ ಜನರು ನೀಡಿದ್ದಾರೆ. ಇದನ್ನ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಇದು ಸಂವಿಧಾನ ವಿರೋಧಿ ನೀತಿಯಾಗಿದೆ. ಇದರಿಂದ ರಾಜ್ಯದ ಜನರಿಗೆ ಹಾನಿಯಾಗುತ್ತಿದೆ. ರಾಜ್ಯದ ಜನರು ಇದನ್ನು ನೋಡುತ್ತಿದ್ದಾರೆ ಎಂದು ಕಿಡಿಕಾರಿದರು.