ಬಳ್ಳಾರಿ: ರಾಜ್ಯದಲ್ಲಿ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ ಇಪ್ಪತ್ತು ಸ್ಥಾನ ಗೆಲ್ಲೋದಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಭವಿಷ್ಯ ನುಡಿದಿದ್ದಾರೆ. ಇಧೇವೇಳೆ ಬಿಜೆಪಿ 400 ಸ್ಥಾನ ಗೆದ್ದೇ ಗೆಲ್ಲುತ್ತದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಬಸವ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ, ತಮಿಳುನಾಡು ಕೇರಳದಲ್ಲಿ ಕಾಂಗ್ರೆಸ್ ಕಳೆದ ಬಾರಿ ಬೋನಸ್ ಅಗಿ ಒಂದೇರಡು ಕ್ಷೇತ್ರ ಗೆದ್ದಿದ್ದರು.
ಆದರೆ ಈಗ ಅದು ಕೂಡ ಗೆಲ್ಲೋದಿಲ್ಲ. ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಆರಂಭದಲ್ಲಿ ಇಂಡಿಯಾ ಒಕ್ಕೂಟ ಒಂದೆರಡು ಮೀಟಿಂಗ್ ನಲ್ಲಿ ದೊಡ್ಡ ಸೌಂಡ್ ಮಾಡಿತ್ತು. ಮೂರನೇ ಮೀಟಿಂಗ್ ಡಮಾರ್ ಆಯ್ತು. ಲೋಕಸಭೆಯಲ್ಲಿ ನಾಲ್ಕು ನೂರು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದರು.
Paytmಗೆ ಬಿಗ್ ಶಾಕ್ ಕೊಟ್ಟ RBI – ಫೆ.29ರ ಬಳಿಕ ವಹಿವಾಟುಗೆ ನಿರ್ಬಂಧ!
ದೇಶದಲ್ಲಿ ರಾಮಮಂದಿರ ನಿರ್ಮಾಣದ ಬಳಿಕ ಸರ್ವಂ ರಾಮಮಯಂ ಆಗಿದೆ. ರಾಮ ರಾಮ ರಾಮ ದೇಶದ ಎಲ್ಲೇಡೆ ರಾಮ ಭಾವನೆ ಹೆಚ್ಚಾಗಿದೆ. ಹೀಗಾಗಿ ಇದೀಗ ಸಿದ್ದರಾಮಯ್ಯ ಅವರಿಗೆ ಜೈಶ್ರೀರಾಂ ಅನ್ನೋ ಹಾಗೇ ಅಯ್ತು. ನಲವತ್ತು ವರ್ಷದ ರಾಜಕಾರಣದಲ್ಲಿ ರಾಮಮಂದಿರ ಕಟ್ಟ ಬೇಕೆಂದು ಒಮ್ಮೆಯೂ ಹೇಳಿಲ್ಲ. ಸಿದ್ದರಾಮಯ್ಯ ಬಾಯಿಯಲ್ಲಿ ಜೈಶ್ರೀರಾಮ್ ಬಂದಿದೆ ಅಂದ್ರೇ ಕಾಂಗ್ರೆಸ್ ನವರಿಗೆ ಗೊತ್ತಾಗಿದೆ ಬಿಜೆಪಿ ಗೆಲ್ಲುತ್ತೆದೆ ಎಂದು ಅಭಿಪ್ರಾಯಪಟ್ಟರು.