ಧಾರವಾಡ:- ಬಿಜೆಪಿಯವರದ್ದು ಕೇವಲ ಟಿವಿಯಲ್ಲಿ ದೇವರನ್ನು ತೋರಿಸುವ ಪ್ರವೃತ್ತಿ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ಧಾರವಾಡದ ಕೆಸಿಡಿ ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನಮ್ಮ ಸಿದ್ದರಾಮಯ್ಯ ಪರ ನೀವು ಇರಬೇಕೊ ಬೇಡವೋ? ಅದಕ್ಕೆ ತಾವು ಬೆಂಬಲ ಕೊಡಬೇಕು ಎಂದು ಫಲಾನುಭವಿಗಳಲ್ಲಿ ಮನವಿ ಮಾಡಿದರು.
ಬಿಜೆಪಿಯವರು ಕೇವಲ ಟಿವಿಯಲ್ಲಿ ದೇವರನ್ನು ತೋರಿಸುತ್ತಾರೆ. ನಮ್ಮ ಸರ್ಕಾರ ದೇವಸ್ಥಾನಗಳಿಗೆ ಉಚಿತವಾಗಿ ಹೋಗಲು ಅವಕಾಶ ಮಾಡಿಕೊಟ್ಟಿದೆ. ನಿಮಗೆ ಐದು ಕೆಜಿ ಅಕ್ಕಿ ಸಿಗುತ್ತಿದೆ, ಅಕ್ಕಿ ಬದಲಿಗೆ ದುಡ್ಡು ಬರುತ್ತಿದೆ. ಯಾರೂ ಹಸಿವಿನಿಂದ ಬಳಲಬಾರದು ಅಂತಾ ಕಾರ್ಯಕ್ರಮ ತಂದಿದ್ದೇವೆ. ಇದು ಬಿಜೆಪಿ ಗ್ಯಾರಂಟಿ ಅಲ್ಲ, ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ. 9 ವರ್ಷಗಳಿಂದ ಅವರು (ಬಿಜೆಪಿ) ಪ್ರಚಾರ ಮಾಡಲಿಲ್ಲ. ನಮ್ಮ ಗ್ಯಾರಂಟಿಗಳು ಬರುತಿದ್ದಂತೆ ಆ ಹೆಸರು ಕಾಪಿ ಮಾಡಿ ಮೋದಿ ಗ್ಯಾರಂಟಿ ಎನ್ನುತಿದ್ದಾರೆ. ಇತಿಹಾಸವನ್ನು ಸುಳ್ಳು ಹೇಳುವ ಕೆಲಸ ಆರಂಭವಾಗಿದೆ ಎಂದರು.
ಬಿಜೆಪಿಯವರು ಹಿಂದೂ ಹಾಗೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಈ ಪದ ಬಳಕೆಗೆ ತಂದಿದ್ದು ಬೇರೆ ಯಾರೂ ಅಲ್ಲ ಡಾ.ಅಂಬೇಡ್ಕರ್. ಇವತ್ತು ಬಿಜೆಪಿಯವರು ಹಿಂದೂ ಎಂದು ಜೋರಾಗಿ ಹೇಳುತ್ತಾರೆ. ಆದರೆ ಕಾನೂನಾತ್ಮಕವಾಗಿ ಅದನ್ನು (ಹಿಂದೂ ಬಿಲ್) ತಂದಿದ್ದು ಬಿ.ಆರ್.ಅಂಬೇಡ್ಕರ್. ಬ್ರಾಹ್ಮಣ, ವೈಶ್ಯ, ಕ್ಷತ್ರೀಯ, ಶೂದ್ರರನ್ನು ಒಗ್ಗೂಡಿಸಿದ್ದು ಅಂಬೇಡ್ಕರ್ ಎಂದರು.