ಬೆಂಗಳೂರು:– ನಾನು ಸಿಎಂ ಹೆಸರು ಹೇಳಿಲ್ಲ, ಕುಂಬಳಕಾಯಿ ಕಳ್ಳನಂತೆ ವರ್ತಿಸಬಾರದು ಎಂದು ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನ್ನ ವಿಚಾರಣೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿರುವುದಾಗಿ ಪೊಲೀಸರು ಹೇಳುತ್ತಾರೆ, ಈ ವಿಚಾರಗಳೆಲ್ಲ ಗೃಹಸಚಿವರಿಗೆ ಗೊತ್ತಿದ್ದಂತಿಲ್ಲ ಎಂದು ಹೇಳಿದ ಬಿ.ಕೆ. ಹರಿಪ್ರಸಾದ್ ಅವರು,
ಸಿಸಿಬಿ ವಿಚಾರಣೆ ವಿಚಾರದಲ್ಲಿ ನಾನು ಸಿದ್ದರಾಮಯ್ಯ ಅವರ ವಿರುದ್ಧ ಮಾತನಾಡಿಲ್ಲ. ಹೀಗಿರುವಾಗ ಕುಂಬಳಕಾಯಿ ಎಂದರೆ ಹೆಗಲು ಮುಟ್ಟಿಕೊಂಡರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ಸಿಸಿಬಿ ಪೊಲೀಸರ ವಿಚಾರಣೆ ಕುರಿತಾಗಿ, ರಾಜ್ಯಪಾಲರಿಗೆ ಬಿಜೆಪಿಯವರು ದೂರು ಕೊಟ್ಟಿದ್ದರು. ವಿಚಾರಣೆ ಮಾಡಿ ತಿಳಿಸಿ ಎಂದು ರಾಜ್ಯಪಾಲರು ಹೇಳಿರಬೇಕು. ಹಾಗಾಗಿ ಇಷ್ಟೊಂದು ಕ್ಷಿಪ್ರವಾಗಿ ಇದು ಬಂದಿದೆ. ದೂರು ಕೊಟ್ಟಿದ್ದರಲ್ಲಿ ತಪ್ಪಿಲ್ಲ, ರಾಜ್ಯಪಾಲರು ಕೇಳಿದ್ದರೆ ಅದರಲ್ಲೂ ತಪ್ಪಿಲ್ಲ. ನಿಜವಾಗಿ ಎಲ್ಲ ಪ್ರಕರಣಗಳು ಹೀಗೆ ಆದರೆ ಉತ್ತಮ.
Buttermilk: ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನವಿದೆ ನೋಡಿ..!
ನಮಗೆ ಮಾತ್ರ ಆದರೆ ಯಾಕೆ ಹೀಗೆ ಎಂದು ಪ್ರಶ್ನೆ ಮಾಡಬೇಕಾಗುತ್ತದೆ, ಉತ್ತರ ಹುಡುಕಬೇಕಾಗುತ್ತದೆ. ರಾಜ್ಯಪಾಲರು ಸಂವಿಧಾನದ ಒಂದು ಅಂಗ ಇದ್ದಂತೆ. ನಾನು ಪರಿಷತ್ ಸದಸ್ಯ, ನನ್ನ ವಿಚಾರಣೆಗೆ ಸಭಾಪತಿ ಅವರ ಅನುಮತಿ ತೆಗೆದುಕೊಳ್ಳಬೇಕಿತ್ತು. ಆದರೆ ಇಲ್ಲಿ, ಶಿಷ್ಟಾಚಾರದ ಉಲ್ಲಂಘನೆ ಕೂಡ ಆಗಿದೆ ಎಂದು ಹರಿಪ್ರಸಾದ್ ಹೇಳಿದರು.