ಹಾವೇರಿ: ಇಂದಿನ ಕಾಲದಲ್ಲಿ ಮನುಷ್ಯ ಮನುಷ್ಯನಿಗೆ ರಕ್ತದಾನ ಮಾಡಲು ಹಿಂದೇಟು ಹಾಕುತ್ತಾನೆ ಆದರೆ ಇಲ್ಲೊಂದು ವಿಶೇಷವಾದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಶ್ವಾನ ಶ್ವಾನಕ್ಕೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದೆ.ಹಾನಗಲ್ ತಾಲೂಕಿನ ಹುಲ್ಲತ್ತಿ ಗ್ರಾಮದ ನಿವಾಸಿ ನಾಗರಾಜ್ ಗೊಲ್ಲರ ಎಂಬುವರ ಶ್ವಾನವೊಂದು,
Acute Leptospairosis ರೋಗದಿಂದ ಬಳಲುತ್ತಿತ್ತು. ಈ ಶ್ವಾನಕ್ಕೆ ರಕ್ತದಾನ ಮಾಡಿ ಸಿರಿ ಎಂಬ ಸಾಕು ನಾಯಿ ಎಲ್ಲರಿಂದ ಭೇಷ್ ಎನಿಸಿಕೊಂಡಿದೆ.ಬಮ್ಮನಹಳ್ಳಿ ಗ್ರಾಮದ ರಂಜಿತ್ ಎಂಬುವರಿಗೆ ಸೇರಿಸ ಸಿರಿ ಎಂಬ ಹೆಸರಿನ ಶ್ವಾನ ಅನಾರೋಗ್ಯದಿಂದ ಬಳಲುತ್ತಿದ್ದ ಶ್ವಾನಕ್ಕೆ ರಸ್ತದಾನ ಮಾಡಿದೆ.
ಈ ಚಿಕಿತ್ಸೆಗೆ ಅಕ್ಕಿಆಲೂರನ ಹಿರಿಯ ಪಶುವೈದ್ಯಾಧಿಕಾರಿ ಡಾ ಅಮಿತ್ ಪುಠಾಣಿಕರ್ ಮತ್ತು ಪಶುವೈದ್ಯ ಡಾ ಸಂತೋಷ್ ಮಲಗುಂದ ಮತ್ತು ತಂಡದವರು ಚಿಕಿತ್ಸೆ ಮಾಡಲಾಗಿ. ರಕ್ತದಾನಕ್ಕೆ ಹೆಸರಾಗಿರುವ ಅಕ್ಕಿಆಲೂರು ಪಶು ಆಸ್ಪತ್ರೆ ಮತ್ತೊಂದು ವಿಶೇಷ ಮಾನವೀಯತೆ ಕೆಲಸಕ್ಕೆ ಸಾಕ್ಷಿಯಾಗಿದೆ.