ಹಾಸನ;- ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಶಿರಾಡಿಘಾಟ್ನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಶಿರಾಡಿಘಾಟ್ನಲ್ಲಿ ಪರ್ಯಾಯ ಮಾರ್ಗ ವ್ಯವಸ್ಥೆಗೆ ಎನ್ಹೆಚ್ಎಐ ಅಧಿಕಾರಿಗಳು ನೀಲನಕ್ಷೆ ತೋರಿಸಿದ್ದಾರೆ. ಇದು 30 ಕಿ.ಮಿ ರಸ್ತೆಯಾಗಿದ್ದು, ಮೂರು ಕಡೆ ಟನಲ್ ನಿರ್ಮಾಣವಾಗುತ್ತದೆ. ಈ ಬಗ್ಗೆ ಕೇಂದ್ರ ಸಾರಿಗೆ ಸಚಿವರ ಗಮನಕ್ಕೆ ತರುತ್ತೇವೆ. ಸೋಮವಾರ ನಾನು ದೆಹಲಿಗೆ ಹೋಗಿ ಕೇಂದ್ರ ಸಚಿವರನ್ನ ಭೇಟಿ ಮಾಡಿ ವಿಷಯ ಪ್ರಸ್ತಾಪ ಮಾಡುತ್ತೇನೆ. ಕೇಂದ್ರ ಸಚಿವರು ಒಪ್ಪಿಗೆ ಕೊಟ್ಟರೆ ದೇಶದಲ್ಲಿ ಹೊಸ ಮೈಲಿಗಲ್ಲು ನಿರ್ಮಾಣವಾಗಲಿದೆ ಎಂದರು.

ಪರ್ಯಾಯ ಮಾರ್ಗ ಮತ್ತು ಸುರಂಗ ಮಾರ್ಗದ ಬಗ್ಗೆ ಕೇಂದ್ರ ತೀರ್ಮಾನ ಮಾಡಬೇಕು. ಈ ಯೋಜನೆಗೆ ಸಂಪೂರ್ಣ ದುಡ್ಡು ಕೊಡುವುದು ರಾಷ್ಟ್ರೀಯ ರಸ್ತೆ ಪ್ರಾಧಿಕಾರ. ನಾವು ಪರಿಸರಕ್ಕೆ ಯಾವುದೇ ತೊಂದರೆ ಮಾಡದೆ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದರು.
