ಬೆಂಗಳೂರು:- ನಗರದ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ ಕೇಸ್ ಗೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಗುರುತನ್ನು ಸದಾಶಿವ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ.
6೦ ವರ್ಷದ ನಾರಾಯಣಸ್ವಾಮಿ, ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಕಳೆದ ಮೂರು ದಿನದ ಹಿಂದೆ ನಾರಾಯಣ ಸ್ವಾಮಿ ಮಿಸ್ಸಿಂಗ್ ಆಗಿದ್ದ. ಈ ಬಗ್ಗೆ ನಾರಾಯಣ ಸ್ವಾಮಿ ಕುಟುಂಬಸ್ಥರು ಬಸವೇಶ್ವರ ನಗರ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ನೀಡಿದ್ದರು. ತಂದೆ-ಮಗನ ನಡುವೆ ಹಣಕಾಸಿನ ವಿಚಾರಕ್ಕೆ ವೈಮನಸ್ಸಿತ್ತು
ಜೊತೆಗೆ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣ ಸ್ವಾಮಿ, ಈ ವಿಚಾರಗಳಿಂದ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.